ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am