ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm