ಬ್ರೇಕಿಂಗ್ ನ್ಯೂಸ್
25-02-26 09:42 am Richard, Headline Karnataka ಕರಾವಳಿ
ಮಂಗಳೂರು, ಫೆ.24: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಮತ್ತು ದುಬಾರಿ ಜೀವನ ಶೈಲಿಯಿಂದ ಬೇಸತ್ತಿರುವ ಐಟಿ ಉದ್ಯೋಗಿಗಳು ಮತ್ತು ಬಹುರಾಷ್ಟ್ರೀಯ ಐಟಿ ಕಂಪನಿಗಳು ಕರ್ನಾಟಕದ ಕರಾವಳಿಯತ್ತ ಮುಖ ಮಾಡುತ್ತಿವೆ. ಕರ್ನಾಟಕ ಸರ್ಕಾರದ 'ಬಿಯಾಂಡ್ ಬೆಂಗಳೂರು' ಯೋಜನೆಯಡಿ ಮಂಗಳೂರು ವೇಗವಾಗಿ ಬೆಳೆಯುತ್ತಿದ್ದು ತಂತ್ರಜ್ಞಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಕಳೆದ 2-3 ವರ್ಷಗಳಲ್ಲಿ ಐಟಿ ವೃತ್ತಿಪರರು ಹಲವಾರು ಕಾರಣಕ್ಕೆ ಮಂಗಳೂರನ್ನು ಆಯ್ಕೆ ಮಾಡುತ್ತಿದ್ದಾರೆ.
ಐಟಿ ಪಾರ್ಕ್ಗಳ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಸಬ್ಸಿಡಿ, ರಿಯಾಯ್ತಿಗಳನ್ನು ನೀಡುತ್ತಿದ್ದು ಐಟಿ ಕಂಪನಿಗಳನ್ನು ಆಕರ್ಷಿಸಲು ಕಾರಣವಾಗಿದೆ. ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳೂರನ್ನು ಮುಂದಿನ ಪ್ರಮುಖ ಟೆಕ್ ತಾಣವೆಂದು ಗುರುತಿಸಿ ಪ್ರೋತ್ಸಾಹಿಸುತ್ತಿದ್ದಾರೆ. ಪ್ರವಾಸೋದ್ಯಮ ದೃಷ್ಟಿಯಿಂದ ಮಂಗಳೂರನ್ನು ಗೋವಾ ರೀತಿ ಬೆಳೆಸಬೇಕೆಂದು ಪ್ರೋತ್ಸಾಹ ನೀಡುತ್ತಿರುವುದು ಐಟಿ ಕಂಪನಿಗಳನ್ನು ಆಕರ್ಷಿಸಿದೆ.
ವರ್ಕ್ ಫ್ರಮ್ ಹೋಮ್ ಪ್ರಭಾವ:
ಕೋವಿಡ್ ಸಮಯದಲ್ಲಿ ಮಂಗಳೂರು- ಉಡುಪಿ ಭಾಗದ ಸುಮಾರು 1ರಿಂದ 1.5 ಲಕ್ಷ ವೃತ್ತಿಪರರು ತಮ್ಮ ಊರುಗಳಿಗೆ ಮರಳಿದ್ದರು. ಶಾಂತಿಯುತ ವಾತಾವರಣ ಮತ್ತು ಗುಣಮಟ್ಟದ ಜೀವನದ ಕಾರಣಕ್ಕೆ ಅನೇಕರು ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಕಂಪನಿಗಳು ಮರಳಿ ಕರೆದರೂ ಬೆಂಗಳೂರಿಗೆ ತೆರಳದೆ ಮಂಗಳೂರಿನ ಕಂಪನಿಯನ್ನೇ ಸೇರಿಕೊಳ್ಳುತ್ತಿದ್ದಾರೆ.
ಐಟಿ ಕಂಪನಿಗಳಿಗೆ ಬೆಂಗಳೂರು ಹೋಲಿಸಿದರೆ ನಿರ್ವಹಣಾ ವೆಚ್ಚವೂ ಕಡಿಮೆ ಇರುವುದರಿಂದ, ಕಳೆದ ಎರಡು ವರ್ಷಗಳಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಮಂಗಳೂರಿನಲ್ಲಿ ಕಾರ್ಯಾಚರಣೆ ಆರಂಭಿಸಿವೆ. ಇದರಿಂದಾಗಿ 2023ರಲ್ಲಿ 15,000 ದಷ್ಟಿದ್ದ ಐಟಿ ಉದ್ಯೋಗಿಗಳ ಸಂಖ್ಯೆ ಇಂದು 30 ಸಾವಿರಕ್ಕೆ ಏರಿಕೆಯಾಗಿದೆ. ಬೆಂಗಳೂರಿನಿಂದ ಹೊರಗೆ ಆರಂಭವಾಗುವ ಕಂಪನಿಗಳಿಗೆ ಬಾಡಿಗೆ ಸಬ್ಸಿಡಿ ಸೇರಿದಂತೆ ಅನೇಕ ರಿಯಾಯಿತಿಗಳು ಸರ್ಕಾರದ ಕಡೆಯಿಂದ ಸಿಗುತ್ತಿವೆ. ಇದರ ಫಲವಾಗಿ 2035ರ ವೇಳೆಗೆ ಮಂಗಳೂರು ಸಂಪೂರ್ಣ ಬದಲಾಗಲಿದ್ದು, ರಾಜ್ಯದ ಎರಡನೇ ಅತಿ ದೊಡ್ಡ ಮತ್ತು ಐಟಿ ವೃತ್ತಿಪರರ ನೆಚ್ಚಿನ ತಾಣವಾಗಿ ಬದಲಾಗಲಿದೆ.
ಇದಲ್ಲದೆ, ಮಂಗಳೂರು ಮತ್ತು ಕೇರಳದ ನಡುವಿನ ಸಾಂಸ್ಕೃತಿಕ ಸಾಮ್ಯತೆ ಮತ್ತು ರಸ್ತೆ- ರೈಲಿನ ಹತ್ತಿರದ ಸಂಪರ್ಕಗಳು ಹೆಚ್ಚಿನ ಉದ್ಯೋಗಿಗಳನ್ನು ಆಕರ್ಷಿಸಲು ಪೂರಕವಾಗಿದೆ. ಹೀಗಾಗಿ ನೆರೆಯ ಕೇರಳದ ವೃತ್ತಿಪರರಿಗೂ ಬೆಂಗಳೂರು ಬದಲು ಮಂಗಳೂರು ನೆಚ್ಚಿನ ತಾಣವಾಗಲಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm