ಬ್ರೇಕಿಂಗ್ ನ್ಯೂಸ್
25-02-26 11:21 am HK News Staffer ಕರಾವಳಿ
ಮಂಗಳೂರು, ಫೆ.25: ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಚಿರತೆ ಅಡ್ಡಾಡುವುದು ಅಲ್ಲಿರುವ ಎರಡು ಸಿಸಿಟಿವಿಗಳಲ್ಲಿ ದಾಖಲಾಗಿದೆ. ಕದ್ರಿ ದೇವಸ್ಥಾನ ಮೇಲ್ಭಾಗದಲ್ಲಿ ಸ್ವಲ್ಪ ಕಾಡು ಹೊಂದಿದ್ದು ಬಿಟ್ಟರೆ ಉಳಿದೆಲ್ಲ ಕಡೆ ಕಾಂಕ್ರೀಟ್ ಕಾಡು ಮಾತ್ರ ಇದೆ. ಇದಲ್ಲದೆ, ದೊಡ್ಡ ಅಪಾರ್ಟ್ಮೆಂಟ್ ಗಳು, ವಿಲ್ಲಾ ರೀತಿಯ ಮನೆಗಳು ಮಾತ್ರ ಇರುವುದರಿಂದ ಚಿರತೆಗೆ ಇಲ್ಲಿ ತಿನ್ನುವುದಕ್ಕೂ ಏನೂ ಸಿಗಲಿಕ್ಕಿಲ್ಲ. ಇಂಥ ಜಾಗದಲ್ಲಿ ಚಿರತೆ ಕಾಣಿಸಿದ್ದು ಸ್ಥಳೀಯರನ್ನು ಅಚ್ಚರಿಗೊಳಿಸಿದೆ.
ಎರಡು ವರ್ಷಗಳ ಹಿಂದೆ ಇದೇ ಜಾಗದಲ್ಲಿ ಕಾಡು ಕೋಣ ಪತ್ತೆಯಾಗಿತ್ತು. ಬಳಿಕ ಅದನ್ನು ಶಕ್ತಿನಗರದ ಮೂಲಕ ಮರಳಿ ಕಾಡಿಗೆ ಅಟ್ಟಲಾಗಿತ್ತು. ವಾರದ ಹಿಂದೆ ಶಕ್ತಿನಗರ ಭಾಗದಲ್ಲಿ ಸಣ್ಣದಾದ ಚಿರತೆ ಕಾಣಿಸಿಕೊಂಡಿದ್ದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಇದೀಗ ಕದ್ರಿ ಬಳಿಯಲ್ಲಿ ದೊಡ್ಡ ಮಾದರಿಯ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದೆ. ಆದರೆ ಯಾರಿಗೂ ನೇರವಾಗಿ ದರ್ಶನಕ್ಕೆ ಸಿಕ್ಕಿಲ್ಲ. ಹೀಗಾಗಿ ಅರಣ್ಯ ಇಲಾಖೆಯವರಿಗೂ ದೂರು ಹೋಗಿಲ್ಲ.
ಸಾಮಾನ್ಯವಾಗಿ ಜನವರಿ, ಫೆಬ್ರವರಿ ತಿಂಗಳಲ್ಲಿ ಆಹಾರ ಅರಸಿಕೊಂಡು ಚಿರತೆಗಳು ನಾಡಿಗೆ ಬರುತ್ತವೆ. ಕಾಡಂಚಿನ ಭಾಗದಲ್ಲಿ ಕೋಳಿ, ನಾಯಿಗಳನ್ನು ಹೊತ್ತೊಯ್ದು ತಿನ್ನುತ್ತವೆ. ಬಜ್ಪೆ, ಎಡಪದವು, ನೀರುಮಾರ್ಗ ಭಾಗದಲ್ಲಿ ಚಿರತೆ ಸಾಮಾನ್ಯವಾಗಿದ್ದರೂ ಈ ಬಾರಿ ಆಗಿಂದಾಗ್ಗೆ ನಗರ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಈ ಸಮಯದಲ್ಲಿ ಚಿರತೆಗಳ ಓಡಾಟ ಸಾಮಾನ್ಯ. ಮತ್ತು ಒಂದು ರಾತ್ರಿಯಲ್ಲಿ ಅವು ಒಂದು ಕಡೆಯಿಂದ ಮತ್ತೊಂದು ಕಡೆಗೆ ಕನಿಷ್ಠ 15 -20 ಕಿಮೀ ಓಡಾಡುತ್ತವೆ. ಹೀಗಾಗಿ ತಿನ್ನಲು ಸಿಗದ ಜಾಗದಲ್ಲಿ ಒಂದೇ ಕಡೆ ಇರುತ್ತವೆ, ನಿಲ್ಲುತ್ತವೆ ಎನ್ನುವುದಕ್ಕಾಗಲ್ಲ ಎಂದು ಹೇಳುತ್ತಾರೆ.
#Leopard spotted in #Kadri, #Mangaluru
— Headline Karnataka (@hknewsonline) February 25, 2026
Clear CCTV footage shows a leopard roaming near Doctors’ Colony close to #KadriTemple around 1 a.m. Forest officials say seasonal movement is common. Residents urged to stay #alert. #Breaking pic.twitter.com/YeIENHznru
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm