ಬ್ರೇಕಿಂಗ್ ನ್ಯೂಸ್
27-02-26 04:43 pm HK News Staffer ಕರಾವಳಿ
ಪುತ್ತೂರು, ಫೆ.27: ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದ್ದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ರಿ ಮನೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮಾಹಿತಿ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ಸುತೇಶ್ ಕೆ.ಪಿ ಅವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳದಲ್ಲಿದ್ದ ಹೆಚ್. ಅಬ್ದುಲ್ ರಹಿಮಾನ್ ಎಂಬವರ ಮನೆಯ ಬಳಿ ತಲುಪಿದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿರುತ್ತಾರೆ. ಸದ್ರಿ ಸ್ಥಳವನ್ನು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು ಪತ್ತೆಯಾಗಿದ್ದು ಒಟ್ಟು 56 ಕೆಜಿ ಮಾಂಸ ಪತ್ತೆಯಾಗಿರುತ್ತದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2026, ಕಲಂ: 4, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ:3(5)) BNS 2023
ರಂತೆ ಪ್ರಕರಣ ದಾಖಲಿಸಲಾಗಿದೆ. ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು, ಪ್ರಕರಣದ ಆರೋಪಿ ಹೆಚ್ ಅಬ್ದುಲ್ ರಹಿಮಾನ್ ಎಂಬವರು ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm