ಬ್ರೇಕಿಂಗ್ ನ್ಯೂಸ್
27-02-26 08:40 pm HK News Desk ಕರಾವಳಿ
ಮಂಗಳೂರು, ಫೆ.27: ನಗರದ ಕದ್ರಿ, ಶಕ್ತಿನಗರ ಭಾಗದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ ಹಗಲು ರಾತ್ರಿ ಗಸ್ತು ತಿರುಗಲು ಅರಣ್ಯ ಇಲಾಖೆ ಸಿಬ್ಬಂದಿಯ ತಂಡವನ್ನು ನಿಯೋಜಿಸಿದ್ದೇವೆ. ಸದ್ಯ ಚಿರತೆ ಇಲ್ಲೇ ಉಳಿದಿರದೇ, ಕಾಡು ಪ್ರದೇಶಕ್ಕೆ ಮರಳಿರುವ ಬಗ್ಗೆ ಅಂದಾಜಿಸಲಾಗಿದೆ. ಹಾಗಿದ್ದೂ ಸಾರ್ವಜನಿಕರು ಚಿರತೆ ಸಹಿತ ಯಾವುದೇ ಅಪಾಯಕಾರಿ ಕಾಡು ಪ್ರಾಣಿಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಟೋಲ್ ಫ್ರೀ ಸಂಖ್ಯೆ 1926 ಗೆ ಮಾಹಿತಿ ನೀಡಿ ಸಹಕರಿಸಿದರೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ಅವರು ಶಾಸಕರ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕಾಡು ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿಗೆ ಬರುತ್ತಿರುವುದು ಸೂಕ್ಷ್ಮ ವಿಚಾರವಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಸಹ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಶಾಸಕರು ಸೂಚನೆ ನೀಡಿದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am