ಬ್ರೇಕಿಂಗ್ ನ್ಯೂಸ್
27-02-26 08:40 pm HK News Desk ಕರಾವಳಿ
ಮಂಗಳೂರು, ಫೆ.27: ನಗರದ ಕದ್ರಿ, ಶಕ್ತಿನಗರ ಭಾಗದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ ಹಗಲು ರಾತ್ರಿ ಗಸ್ತು ತಿರುಗಲು ಅರಣ್ಯ ಇಲಾಖೆ ಸಿಬ್ಬಂದಿಯ ತಂಡವನ್ನು ನಿಯೋಜಿಸಿದ್ದೇವೆ. ಸದ್ಯ ಚಿರತೆ ಇಲ್ಲೇ ಉಳಿದಿರದೇ, ಕಾಡು ಪ್ರದೇಶಕ್ಕೆ ಮರಳಿರುವ ಬಗ್ಗೆ ಅಂದಾಜಿಸಲಾಗಿದೆ. ಹಾಗಿದ್ದೂ ಸಾರ್ವಜನಿಕರು ಚಿರತೆ ಸಹಿತ ಯಾವುದೇ ಅಪಾಯಕಾರಿ ಕಾಡು ಪ್ರಾಣಿಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಟೋಲ್ ಫ್ರೀ ಸಂಖ್ಯೆ 1926 ಗೆ ಮಾಹಿತಿ ನೀಡಿ ಸಹಕರಿಸಿದರೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ಅವರು ಶಾಸಕರ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕಾಡು ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿಗೆ ಬರುತ್ತಿರುವುದು ಸೂಕ್ಷ್ಮ ವಿಚಾರವಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಸಹ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಶಾಸಕರು ಸೂಚನೆ ನೀಡಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am