ಬ್ರೇಕಿಂಗ್ ನ್ಯೂಸ್
27-02-26 08:59 pm Mangalore Correspondent ಕರಾವಳಿ
ಮಂಗಳೂರು, ಫೆ.27: ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವತಿಯಿಂದ ಈ ವಿಮಾನ ಹಾರಾಟ ನಡೆಯಲಿದ್ದು, ಕರಾವಳಿ ಭಾಗದಿಂದ ಹೆಚ್ಚಿನ ಸಂಖ್ಯೆಯ ಜನರು ಉದ್ಯೋಗ ಮತ್ತು ವ್ಯಾಪಾರ ನಿಮಿತ್ತ ಮಸ್ಕತ್ಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಗೆ ಹೆಚ್ಚಿನ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ವ್ಯವಹಾರ ನಡೆಸಿ, ವಿಮಾನಯಾನ ಪುನಾರಂಭಿಸುವಂತೆ ಮನವಿ ಸಲ್ಲಿಸಿದ್ದರು.
ಸದ್ಯದ ವೇಳಾಪಟ್ಟಿಯ ಪ್ರಕಾರ, ವಾರದಲ್ಲಿ ಎರಡು ದಿನ ಅಂದರೆ ಪ್ರತಿ ಭಾನುವಾರ ಮತ್ತು ಮಂಗಳವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಹಾರಾಟ ನಡೆಸಲಿದೆ. ಈ ನೇರ ಸೇವೆಯಿಂದಾಗಿ ಪ್ರಯಾಣದ ಸಮಯ ಉಳಿತಾಯವಾಗುವುದಲ್ಲದೆ, ಅನಿವಾಸಿ ಭಾರತೀಯರಿಗೆ ತಮ್ಮ ಊರುಗಳಿಗೆ ನೇರವಾಗಿ ಪ್ರಯಾಣಿಸಲು ಬಹಳಷ್ಟು ಅನುಕೂಲವಾಗಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ "ಮಂಗಳೂರು- ಮಸ್ಕತ್ ನೇರ ವಿಮಾನಯಾನ ಸೇವೆಯು ಅಚಾನಕ್ ಆಗಿ ಸ್ಥಗಿತಗೊಂಡ ಕಾರಣ ಮಸ್ಕತ್ನಲ್ಲಿ ನೆಲೆಸಿರುವ ನಮ್ಮ ಕರಾವಳಿ ಭಾಗದ ಸಾವಿರಾರು ಪ್ರಯಾಣಿಕರಿಗೆ ತೀವ್ರ ಸಂಕಷ್ಟ ಎದುರಾಗಿತ್ತು. ಮಸ್ಕತ್ನಿಂದ ಮಂಗಳೂರಿಗೆ ಬರಬೇಕಾದವರು ದೆಹಲಿ, ಮುಂಬೈ ಅಥವಾ ಕಣ್ಣೂರು ಮೂಲಕ ಸುತ್ತಿ ಬಳಸಿ ಪ್ರಯಾಣಿಸಬೇಕಾಗಿತ್ತು. ಈ ಸಮಸ್ಯೆ ಬಗ್ಗೆ ನಿರಂತರ ಪ್ರಯತ್ನ ಹಾಗೂ ಮನವಿಗೆ ಸ್ಪಂದಿಸಿ, ಮಾರ್ಚ್ 1ರಿಂದ ಈ ಸೇವೆಯನ್ನು ಪುನರಾರಂಭಿಸಲು ಕ್ರಮ ಕೈಗೊಂಡ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ರಾಮಮೋಹನ್ ನಾಯ್ಡು ಅವರಿಗೆ ಸಮಸ್ತ ಅನಿವಾಸಿ ಕರಾವಳಿಗರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm