ಬ್ರೇಕಿಂಗ್ ನ್ಯೂಸ್
01-03-26 04:07 pm HK News Desk ಕರಾವಳಿ
ಉಡುಪಿ, ಮಾ.1: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣಾ ಪಿಎಸ್ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ.
‘ನಮ್ಮ ಪೊಲೀಸ್, ನಮ್ಮ ಹೆಮ್ಮೆ. ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿ’ಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು.
ಉಡುಪಿ ನಗರ ಪಂಚಾಯತ್ ಮುಂಭಾಗದಲ್ಲಿ ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನವರಾದ ನಾಸಿರ್ ಹುಸೇನ್, ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಠಾಣೆ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಂಡ್ಲೂರಿನಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. 58 ವರ್ಷದ ನಾಸಿರ್ ಹುಸೇನ್ 2010ರಲ್ಲಿ ಪಿಎಸ್ಐ ಆಗಿ ಇಲಾಖೆ ಸೇರಿದ್ದು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am