ಬ್ರೇಕಿಂಗ್ ನ್ಯೂಸ್
02-03-26 10:06 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 2: ನಗರದಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯ ಭಾಗವನ್ನು ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ದಕ್ಷಿಣ ರೈಲ್ವೆಯಿಂದ ಅನುಮೋದನೆ ದೊರೆತಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಕಚೇರಿ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರ ಕಚೇರಿ, ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಉಂಟಾಗಿರುವ ಗಂಭೀರ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಈ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾಗಿದೆ. ಅದರಂತೆ ಸಮಸ್ಯೆಯ ಗಂಭೀರತೆ ಅರಿತ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು, ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ರೈಲ್ವೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಮಾತ್ರವಲ್ಲದೆ, ಈ ಲೆವೆಲ್ ಕ್ರಾಸಿಂಗ್ನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರೈಲ್ವೆ ಅಧಿಕಾರಿಗಳು ಸಮನ್ವಯತೆಯಿಂದ ಪರಿಹಾರ- ಮಾರ್ಗೋಪಾಯಗಳ ಬಗ್ಗೆ ಸಮಗ್ರ ವರದಿಯನ್ನು ತಯಾರಿಸಬೇಕು ಹಾಗೂ ಈ ವರದಿಯನ್ನು ರೈಲ್ವೆ ಇಲಾಖೆಯ ಅಧಿಕೃತ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುವಂತೆ ಮನಪಾ ಅಧಿಕಾರಿಗಳಿಗೆ ಸೂಚಿಸಿದ್ದರು. ಪಾಲಿಕೆ ನೀಡುವ ಈ ವರದಿ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿರಲಿದೆ ಎಂದು ಸಂಸದರು ಹೇಳಿದ್ದರು.
ದಕ್ಷಿಣ ರೈಲ್ವೆ ವ್ಯಾಪ್ತಿಗೆ ಸೇರಿರುವ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿ ಪಡಿಸುವುದಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ದಕ್ಷಿಣ ರೈಲ್ವೆಯ ಜಿಎಂ ಹಾಗೂ ಪಾಲಕ್ಕಾಡ್ ವಿಭಾಗದ ಡಿಆರ್ಎಂ ಅವರೊಂದಿಗೆ ಸಂಸದರು ನಿರಂತರ ಚರ್ಚೆ ನಡೆಸಿದ ಹಿನ್ನೆಲೆಯಲ್ಲಿ ಈ ರೈಲ್ವೆ ಗೇಟ್ ವ್ಯಾಪ್ತಿಯ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಮೂಲಕ ಗಂಭೀರ ಸಮಸ್ಯೆಗೆ ಪರಿಹಾರ ಒದಗಿಸುವುದಕ್ಕೆ ಸಾಧ್ಯವಾಗಿದೆ. ಈ ಲೆವೆಲ್ ಕ್ರಾಸಿಂಗ್ ರಸ್ತೆ ಅಗಲೀಕರಣಕ್ಕೆ ಸದ್ಯ ಅಂದಾಜು ಪಟ್ಟಿ ಸಿದ್ಧಪಡಿಸಲಾಗುತ್ತದೆ. ಮಾರ್ಚ್ ಅಂತ್ಯದೊಳಗೆ ಪಾಂಡೇಶ್ವರ ಲೆವಲ್ ಕ್ರಾಸಿಂಗ್ ರಸ್ತೆ ಅಗಲೀಕರಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಇಲ್ಲಿ ಮನಪಾ ವ್ಯಾಪ್ತಿಗೆ ಸಂಬಂಧಪಟ್ಟ ಚತುಷ್ಪಥ ರಸ್ತೆ ಇದ್ದು, ರೈಲ್ವೆ ವ್ಯಾಪ್ತಿಯ ರಸ್ತೆ ಮಾತ್ರ ದ್ವಿಪಥವಾಗಿದೆ. ಇಲ್ಲಿ ಅಗಲೀಕರಣಗೊಂಡರೆ ಲೆವೆಲ್ ಕ್ರಾಸಿಂಗ್ ರಸ್ತೆ ಕೂಡ ಚತುಷ್ಪಥ ರಸ್ತೆಯಾಗಿ ವಾಹನ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ. ಜತೆಗೆ ಸುರಕ್ಷತೆಗಾಗಿ 'ಡಬಲ್ ಬೂಮ್' ಆಟೋಮ್ಯಾಟಿಕ್ ಗೇಟ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದರಿಂದ ಈ ರಸ್ತೆಯಲ್ಲಿ ಭವಿಷ್ಯದಲ್ಲಿ ಸುಗಮ ಸಂಚಾರದ ಜತೆಗೆ ಟ್ರಾಫಿಕ್ ದಟ್ಟಣೆ ಸಮಸ್ಯೆಯೂ ಬಗೆಹರಿಯಲಿದೆ ಎಂದು ಸಂಸದರ ಕಚೇರಿ ತಿಳಿಸಿದೆ.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm