ಬ್ರೇಕಿಂಗ್ ನ್ಯೂಸ್
03-03-26 10:37 am HK News Staffer ಕರಾವಳಿ
ಉಳ್ಳಾಲ, ಮಾ.3: ಒಮಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾನು ಪ್ರೀತಿಸುತ್ತಿದ್ದ ಹುಡುಗಿ ನಾಲ್ಕು ವರ್ಷಗಳ ಪ್ರೀತಿಯನ್ನ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಸೋಮೇಶ್ವರದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಪುನೀತ್ ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಬಂದಿದ್ದ ಪುನೀತ್ ಮತ್ತೆ ಒಮನ್ಗೆ ಮರಳಿದ್ದರು.

ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾ ನಿವಾಸಿ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಬಹಳ ಅನ್ಯೋನ್ಯವಾಗಿದ್ದ ಜೋಡಿಯು ಹಲವೆಡೆ ಸುತ್ತಾಡಿರುವ ಫೋಟೊಗಳನ್ನ ಜಾಲತಾಣಗಳಲ್ಲಿ ಹಾಕಿದ್ದರು.
ಇತ್ತೀಚಿನ ದಿನಗಳಲ್ಲಿ ಯುವತಿ ಪುನೀತ್ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೂ ಪ್ರತಿಕ್ರಿಯೆ ನೀಡದೇ ಪ್ರೀತಿಯನ್ನ ನಿರಾಕರಿಸುತ್ತಿದ್ದಳೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರೇಯಸಿಯೊಂದಿಗೆ ವಿರಸ ತಾಳಲಾರದೆ ಪುನೀತ್ ಮನನೊಂದಿದ್ದು, ಈ ವಿಚಾರವನ್ನು ತನ್ನ ಆಪ್ತ ಗೆಳೆಯರಲ್ಲೂ ಪ್ರಸ್ತಾಪಿಸಿದ್ದರು.

ಪ್ರೇಮ ವೈಫಲ್ಯದ ಸಂಕಟದಲ್ಲಿ ನರಳುತ್ತಿದ್ದ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅಶಾಂತ ಪರಿಸ್ಥಿತಿಯ (ಇರಾನ್ ಸಂಘರ್ಷ) ಹಿನ್ನೆಲೆ ಒಮನ್ ದೇಶದ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚುವರಿ ಸಮಯ ಬೇಕಾಗುವ ಸಾಧ್ಯತೆ ಇದ್ದು, ಮೃತದೇಹವನ್ನ ಭಾರತಕ್ಕೆ ತರಲು ವಿಳಂಬವಾಗಬಹುದೆಂದು ಕುಟುಂಬದ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಮೃತ ಪುನೀತ್ ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm