ಬ್ರೇಕಿಂಗ್ ನ್ಯೂಸ್
03-03-26 03:10 pm HK News Staffer ಕರಾವಳಿ
ಮಂಗಳೂರು, ಮಾ.2: ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ ಲಂಚಕ್ಕೆ ಕೈಯೊಡ್ಡಿದ್ದಾಗಲೇ ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯ ಸೆಕೆಂಡ್ ಡಿವಿಶನ್ ಕ್ಲರ್ಕ್ ಸಂಪತ್ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದು, 2025ರಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಕಾಮಗಾರಿಗಳನ್ನು ನಿರ್ವಹಿಸಿದ್ದು, ಸದರಿ ಕೆಲಸದ ಬಿಲ್ಗೆ 4 ಪರ್ಸೆಂಟ್ನಂತೆ ಒಟ್ಟು ರೂ. 22,600/- ಕೊಡಬೇಕು ಎಂಬುದಾಗಿ ಮಂಗಳೂರಿನ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಎಸ್.ಡಿ.ಎ ಆಗಿರುವ ಸಂಪತ್ ಎಂಬವರು ಫಿರ್ಯಾದುದಾರರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಮವಾರ ಮಾರ್ಚ್ 02 ರಂದು ಆರೋಪಿ ಸಂಪತ್ ಅವರು ಫಿರ್ಯಾದುದಾರರಿಂದ ರೂ. 22,600/- ಲಂಚದ ಹಣವನ್ನು ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿಯವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಕಾರ್ಯಾಚರಣೆಯನ್ನ ಪೊಲೀಸ್ ಅಧೀಕ್ಷಕ ಬಿ.ಪಿ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಸುರೇಶ್ ಕುಮಾರ್ ಪಿ, ಡಾ. ಗಾನ ಪಿ ಕುಮಾರ್, ಪಿ.ಐ ಶ್ರೀಮತಿ ಭಾರತಿ ಜಿ, ರವರ ಉಸ್ತುವಾರಿಯಲ್ಲಿ ಪೊಲೀಸ್ ನಿರೀಕ್ಷಕರಾದ ಚಂದ್ರಶೇಖರ್ ಕೆ.ಎನ್. ಅವರು ಸಿಬ್ಬಂದಿಗಳಾದ ರಾಜಪ್ಪ, ಮಹೇಶ್, ಆದರ್ಶ್, ರಾಮ ನಾಯ್ಕ, ಗಂಗಣ್ಣ, ಮಹಾದೇವ, ಪವಿತ್ರ, ಲಕ್ಷ್ಮೀ, ರವಿ ಪವಾರ್, ನವೀನ್ ಪಾಲ್ಗೊಂಡಿದ್ದರು.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm