ಬ್ರೇಕಿಂಗ್ ನ್ಯೂಸ್
04-03-26 09:31 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 4: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ 6 ಮಂದಿ ಸದಸ್ಯರ ಅಧ್ಯಯನ ಸಮಿತಿಯನ್ನು ಸರಕಾರ ನೇಮಿಸಿತ್ತು.
ಸದ್ರಿ ಸಮಿತಿಯು ಜನವರಿ 19 ಹಾಗೂ 20ರಂದು ಆಂಧ್ರಪ್ರದೇಶ ರಾಜ್ಯದ ಸಚಿವಾಲಯ, ವಿವಿಧ ಇಲಾಖೆ, ಕಚೇರಿಗಳಿಗೆ ಭೇಟಿ ನೀಡಿ ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳು ಹಾಗೂ ವಿಧಿ ವಿಧಾನಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿತ್ತು.
ಸಮಿತಿಯ ವರದಿಯನ್ನು ವಿಕಾಸ ಸೌಧದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಾರ್ಯದರ್ಶಿ ಜೆ.ಮಂಜುನಾಥ್ ಅವರಿಗೆ ಅಧ್ಯಯನ ಸಮಿತಿ ಸದಸ್ಯರು ಸಲ್ಲಿಸಿದರು. ತುಳು ಭಾಷೆಯ ಹಿನ್ನೆಲೆ ಹಾಗೂ ಚರಿತ್ರೆಯ ಬಗೆಗಿನ ಪ್ರಸ್ತಾವನೆಯನ್ನು ಕೂಡ ವರದಿ ಜೊತೆಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಅಧ್ಯಯನ ಸಮಿತಿ ಸದಸ್ಯರಾದ ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ ಶೆಟ್ಟಿ, ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ಶ್ರೀಮತಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಶ್ರೀಮತಿ ಕೆ.ಎಂ ಶುಭಶ್ರೀ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am