ಬ್ರೇಕಿಂಗ್ ನ್ಯೂಸ್
05-03-26 12:42 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 4: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು, ಸ್ಥಳೀಯರು ಅಚ್ಚರಿಗೆ ಒಳಗಾಗಿದ್ದಾರೆ. ಈ ಬಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯ ಶಾಸಕ ಸ್ಪೀಕರ್ ಯು.ಟಿ. ಖಾದರ್ ತನಿಖೆಗೆ ಸೂಚಿಸಿದ್ದಾರೆ.
ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಬಳಿಕ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿರುವುದು ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್ಗಳೆಂದು ಸ್ಥಳೀಯರು ತಿಳಿಸಿದ್ದಾರೆ. ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಅವರು ಮಾಹಿತಿ ನೀಡಿದ್ದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್ಗಳು ನದಿ ಬದಿಯಲ್ಲಿ ಚದುರಿ ಬಿದ್ದಿದ್ದವು. ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಪ್ರತಿಕ್ರಿಯಿಸಿ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ನದಿಗೆ ತಲುಪಿದ್ದು ಹೇಗೆ ಎನ್ನುವುದು ಅಚ್ಚರಿಯಾಗಿದೆ. ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಆಧಾರ್ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದಿದ್ದಾರೆ.
ಈ ಬಗ್ಗೆ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಸ್ಥಳೀಯ ಶಾಸಕರಿಗೂ ಗ್ರಾಮ ಪಂಚಾಯತ್ ವತಿಯಿಂದ ದೂರು ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am