ಬ್ರೇಕಿಂಗ್ ನ್ಯೂಸ್
05-03-26 12:42 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 4: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು, ಸ್ಥಳೀಯರು ಅಚ್ಚರಿಗೆ ಒಳಗಾಗಿದ್ದಾರೆ. ಈ ಬಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯ ಶಾಸಕ ಸ್ಪೀಕರ್ ಯು.ಟಿ. ಖಾದರ್ ತನಿಖೆಗೆ ಸೂಚಿಸಿದ್ದಾರೆ.
ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಬಳಿಕ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿರುವುದು ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್ಗಳೆಂದು ಸ್ಥಳೀಯರು ತಿಳಿಸಿದ್ದಾರೆ. ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಅವರು ಮಾಹಿತಿ ನೀಡಿದ್ದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್ಗಳು ನದಿ ಬದಿಯಲ್ಲಿ ಚದುರಿ ಬಿದ್ದಿದ್ದವು. ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಪ್ರತಿಕ್ರಿಯಿಸಿ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ನದಿಗೆ ತಲುಪಿದ್ದು ಹೇಗೆ ಎನ್ನುವುದು ಅಚ್ಚರಿಯಾಗಿದೆ. ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಆಧಾರ್ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದಿದ್ದಾರೆ.
ಈ ಬಗ್ಗೆ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಸ್ಥಳೀಯ ಶಾಸಕರಿಗೂ ಗ್ರಾಮ ಪಂಚಾಯತ್ ವತಿಯಿಂದ ದೂರು ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm