ಬ್ರೇಕಿಂಗ್ ನ್ಯೂಸ್
05-03-26 02:34 pm HK News Staffer ಕರಾವಳಿ
ಉಳ್ಳಾಲ, ಮಾ.5: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ.
ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.


ಅರಣ್ಯಾಧಿಕಾರಿ ಮೆಹಬೂಬ್ ಸಾಬ್(35) ಅವರು ತನ್ನ ಪತ್ನಿ ಫರ್ಝಾನ ಮೆಹಬೂಬ್ ಮತ್ತು ಪುಟ್ಟ ಮಗುವಿನೊಂದಿಗೆ ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಕಳೆದ ಆರು ತಿಂಗಳುಗಳಿಂದ ವಾಸವಿದ್ದರು. ಕಳೆದ ಶುಕ್ರವಾರ ಮಧ್ಯಾಹ್ನ ಮೆಹಬೂಬ್ ಅವರು ಕುಟುಂಬದೊಂದಿಗೆ ತನ್ನ ಊರು ಕೊಪ್ಪಳಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಒಂಬತ್ತು ಗಂಟೆ ವೇಳೆಗೆ ಮೆಹಬೂಬ್ ಅವರು ತನ್ನ ಕುಟುಂಬ ಸಮೇತ ಕಾಪಿಕಾಡಿನ ಮನೆಗೆ ವಾಪಸಾದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯೊಳಗೆ ನುಗ್ಗಿದ ಕಳ್ಳರು ಹಾಲ್ ಮತ್ತು ಎರಡು ಕೋಣೆಯೊಳಗಿನ ಕಪಾಟುಗಳನ್ನ ಜಾಲಾಡಿದ್ದು, ಲಾಕರ್ ಗಳಲ್ಲಿದ್ದ 181 ಗ್ರಾಂ ಚಿನ್ನ, ಮಗುವಿನ ಬೆಳ್ಳಿಯ ಆಭರಣಗಳು ಹಾಗೂ ಮೆಹಬೂಬ್ ಅವರು ಬ್ಯಾಂಕಿನಿಂದ ಸಾಲ ಪಡೆದಿದ್ದ ಹತ್ತೂವರೆ ಲಕ್ಷ ರೂಪಾಯಿ ನಗದನ್ನ ದೋಚಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಕಾಪಿಕಾಡು ಪ್ರದೇಶದಲ್ಲಿ ಸಾಕಷ್ಟು ಮನೆಗಳಿದ್ದರೂ ಕಳ್ಳತನ ಯಾವಾಗ ನಡೆದಿದೆಯೆಂದು ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ. ಕಳ್ಳತನ ನಡೆದ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲದೆ ಪೊಲೀಸರಿಗೆ ಪ್ರಕರಣದ ತನಿಖೆ ಸವಾಲಾಗಿ ಪರಿಣಮಿಸಿದೆ.
ಕೆಲ ವರುಷಗಳ ಹಿಂದಷ್ಟೆ ಅರಣ್ಯಾಧಿಕಾರಿ ನೆಲೆಸಿರುವ ಪಕ್ಕದ ಮನೆಯಲ್ಲೂ ಮನೆ ಕಳ್ಳತನ ನಡೆದಿತ್ತು. ಅಂದು ಕೂಡ ಮನೆ ಮಂದಿ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಕಳ್ಳತನ ನಡೆಸಿದ್ದಲ್ಲದೆ, ಅಡುಗೆ ಕೋಣೆಯಲ್ಲಿದ್ದ ಊಟವನ್ನೂ ಉಂಡು ಹೋಗಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am