ಬ್ರೇಕಿಂಗ್ ನ್ಯೂಸ್
05-03-26 07:38 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 5: ನಗರದ ಬದ್ರಿಯಾ ರಸ್ತೆಯ ಲಾಡ್ಜ್ ಒಂದರಲ್ಲಿ ಕುಳಿತು ನಿಷೇಧಿತ ಮಾದಕ ದ್ರವ್ಯ MDMA ಮತ್ತು ಹೈಡ್ರೋ ವೀಡ್ ಗಾಂಜಾವನ್ನು ಮಂಗಳೂರು ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರೀನ್ ಪಾರ್ಕ್ ಮೈದಾನ ಬಂದರು ಬಳಿಯಲ್ಲಿ ನಿಷೇಧಿತ ಮಾದಕ ವಸ್ತು ಹೈಡ್ರೋ ವೀಡ್ ಗಾಂಜಾ ಮತ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕೋಟೇಶ್ವರ, ಹಾಲಿ ಪಾಂಡೇಶ್ವರ ನಿವಾಸಿಗಳಾದ ಮೊಹಮ್ಮದ್ ಸಯ್ಯದ್ ಆಫ್ರೀದಿ (26),
ಅಹಮ್ಮದ್ ಅಲಿ ಅರ್ಷಾನ್ (22), ಬಲ್ಮಠ ನಿವಾಸಿ ಮಕ್ಸೂದ್ ಸಾಗ್ (23), ಕೊಟ್ಟಾಯಂ ಮೂಲದ ಫೆಲಿಕ್ಸ್ ಪಿ. ಜೋಸೆಫ್ (20), ಕಂಕನಾಡಿ ನಿವಾಸಿ ಎಡಲ್ ರೋಚ್ (33), ಮಲ್ಲಿಕಟ್ಟೆ ನಿವಾಸಿ ಆರೋನ್ ವಿಶಾಲ್ ಲಾಸ್ರಾದೋ (18) ಬಂಧಿತರು. ಒಂದು ಪ್ರಕರಣದಲ್ಲಿ ಆರೋಪಿಗಳಿಂದ MDMA 53.87 ಗ್ರಾಂ, ಹೈಡ್ರೋವಿಡ್ ಗಾಂಜಾ - 103. 20 ಗ್ರಾಂ ಮತ್ತು MG Hector ವಾಹನ ಹಾಗೂ ಇನ್ನೊಂದು ಪ್ರಕರಣದಲ್ಲಿ ಹೈಡ್ರೋವಿಡ್ ಗಾಂಜಾ - 60 ಗ್ರಾಂ, ಗಾಂಜಾ- 1 ಕೆಜಿ155 ಗ್ರಾಂ ಮತ್ತು Maruti Swift ಕಾರು ವಶಕ್ಕೆ ಪಡೆಯಲಾಗಿದೆ.
ಮುಂಬೈ ನಿವಾಸಿಯಾದ ಸಂದೀಪ್ ಶೆಟ್ಟಿ ದುಬೈನಲ್ಲಿ ಹೋಟೆಲ್ ಒಂದರಲ್ಲಿ ಮ್ಯಾನೇಜರ್ ಆಗಿದ್ದು, ನಿಷೇಧಿತ ಮಾದಕ ವಸ್ತುವಾದ ಹೈಡ್ರೋ ವೀಡ್ ಗಾಂಜಾವನ್ನು ಬೆಂಗಳೂರಿಗೆ ವಿಮಾನದ ಮುಖಾಂತರ ಸಾಗಿಸುತ್ತಿದ್ದು, ಬೆಂಗಳೂರು ವಿಮಾನ ನಿಲ್ದಾಣದಿಂದ ಬೇರೆಡೆ ಸಾಗಿಸುವ ಕೆಲಸವನ್ನು ಎಡಲ್ ರೋಚ್ ಮಾಡುತ್ತಿದ್ದನು. ಎಡಲ್ ರೋಚ್ ಮತ್ತು ಆರೋನ್ ವಿಶಾಲ್ ಲಾಸ್ರಾದೋ ಅವರು ಮಕ್ಸೂದ್ ಸಾಗ್ ಎಂಬಾತನ ಮೂಲಕ ಮೊಹಮ್ಮದ್ ಸಯ್ಯದ್ ಆಫ್ರೀದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ಎಂಬವರಿಗೆ ಬೆಂಗಳೂರಿನಲ್ಲಿ ಮಾದಕ ವಸ್ತುವನ್ನು ಪೂರೈಸಿರುತ್ತಾರೆ.
ಮೊಹಮ್ಮದ್ ಸಯ್ಯದ್ ಆಫ್ರಿದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ಬೆಂಗಳೂರಿನಿಂದ ಗಾಂಜಾ, ಹೈಡ್ರೋವಿಡ್ ಮತ್ತು ಎಂ.ಡಿ.ಎಂ.ಎ ಅನ್ನು ತಮ್ಮ ಎಂ.ಜಿ ಹೆಕ್ಟರ್ ವಾಹನದಲ್ಲಿ ತೆಗೆದುಕೊಂಡು ಬಂದಿದ್ದರು. ಇವರು ಬಂದರಿನ ಕ್ಲಾಸಿಕ್ ಕಂಫರ್ಟ್ ಲಾಡ್ಜ್ ನಲ್ಲಿ ಇರುವಾಗ ಬಂಧನ ಮಾಡಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm