ಬ್ರೇಕಿಂಗ್ ನ್ಯೂಸ್
06-03-26 12:17 pm supritha Jain ಕರಾವಳಿ
ಮಂಗಳೂರು, ಮಾರ್ಚ್ 06: ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ 2′ ಬಿಡುಗಡೆಗೂ ಮುನ್ನವೇ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿತ್ತು. ಚಿತ್ರದಲ್ಲಿನ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರದ ವಿಷಯಗಳ ಚಿತ್ರಣ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತದೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಇದರ ಸುತ್ತ ಹೊಸ ವಿವಾದಗಳು ಸೃಷ್ಟಿಯಾಗಿದೆ.
ಪುತ್ತೂರಿನ ಜಿಎಲ್ ಒನ್ ಮಾಲ್ನಲ್ಲಿ ಸೀತಾ ಪರಿವಾರ ಸಂಘಟನೆಯ ವತಿಯಿಂದ 16 ರಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸಿನಿಮಾ ಪ್ರದರ್ಶನ ಆಯೋಜಿಸಲಾಗಿತ್ತು. ನಿನ್ನೆ ಸಂಜೆ ಮೂರು ಪ್ರದರ್ಶನಗಳು ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕೆಲವು ರಾಜಕೀಯ ಹಾಗೂ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯಕ್ರಮದ ಕುರಿತು ವಿವಾದಾತ್ಮಕ ಸಂದೇಶಗಳು ಹರಿದಾಡಿದ್ದು, ಮಾಲ್ ಅನ್ನು ಬಹಿಷ್ಕರಿಸುವಂತೆ ಕೆಲವರು ಕರೆ ನೀಡಿರುವ ಆರೋಪಗಳು ಕೇಳಿಬಂದಿವೆ. ಜೊತೆಗೆ ಮುಸ್ಲಿಂ ಸಮುದಾಯದ ಯುವತಿಯರು ಮಾಲ್ಗೆ ಹೋಗುವಾಗ ಎಚ್ಚರಿಕೆ ವಹಿಸಬೇಕು ಎಂಬ ರೀತಿಯ ಸಂದೇಶಗಳೂ ವೈರಲ್ ಆಗಿದ್ದು, ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.
ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆಗಳು ಬಂದಿರುವ ಆರೋಪವೂ ಕೇಳಿಬಂದಿದೆ. ಕಾರ್ಯಕ್ರಮದ ಬುಕ್ಕಿಂಗ್ಗಾಗಿ ನೀಡಲಾಗಿದ್ದ ಮಹಿಳೆಯರ ಮೊಬೈಲ್ ಸಂಖ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕೆಲ ಕರೆಗಳು ವಿದೇಶಗಳಿಂದ ಬಂದಿರುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿ, ಸ್ಥಳೀಯ ಹಾಗೂ ವಿದೇಶ ಮೂಲದ ಕೆಲ ಶಕ್ತಿಗಳು ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ಜಗ್ಗದೆ ಸಮಾಜದಲ್ಲಿ ಜಾಗೃತಿ ಕಾರ್ಯ ಮುಂದುವರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಭದ್ರತೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am