ಬ್ರೇಕಿಂಗ್ ನ್ಯೂಸ್
06-03-26 12:17 pm supritha Jain ಕರಾವಳಿ
ಮಂಗಳೂರು, ಮಾರ್ಚ್ 06: ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ 2′ ಬಿಡುಗಡೆಗೂ ಮುನ್ನವೇ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿತ್ತು. ಚಿತ್ರದಲ್ಲಿನ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರದ ವಿಷಯಗಳ ಚಿತ್ರಣ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತದೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಇದರ ಸುತ್ತ ಹೊಸ ವಿವಾದಗಳು ಸೃಷ್ಟಿಯಾಗಿದೆ.
ಪುತ್ತೂರಿನ ಜಿಎಲ್ ಒನ್ ಮಾಲ್ನಲ್ಲಿ ಸೀತಾ ಪರಿವಾರ ಸಂಘಟನೆಯ ವತಿಯಿಂದ 16 ರಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸಿನಿಮಾ ಪ್ರದರ್ಶನ ಆಯೋಜಿಸಲಾಗಿತ್ತು. ನಿನ್ನೆ ಸಂಜೆ ಮೂರು ಪ್ರದರ್ಶನಗಳು ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕೆಲವು ರಾಜಕೀಯ ಹಾಗೂ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯಕ್ರಮದ ಕುರಿತು ವಿವಾದಾತ್ಮಕ ಸಂದೇಶಗಳು ಹರಿದಾಡಿದ್ದು, ಮಾಲ್ ಅನ್ನು ಬಹಿಷ್ಕರಿಸುವಂತೆ ಕೆಲವರು ಕರೆ ನೀಡಿರುವ ಆರೋಪಗಳು ಕೇಳಿಬಂದಿವೆ. ಜೊತೆಗೆ ಮುಸ್ಲಿಂ ಸಮುದಾಯದ ಯುವತಿಯರು ಮಾಲ್ಗೆ ಹೋಗುವಾಗ ಎಚ್ಚರಿಕೆ ವಹಿಸಬೇಕು ಎಂಬ ರೀತಿಯ ಸಂದೇಶಗಳೂ ವೈರಲ್ ಆಗಿದ್ದು, ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.
ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆಗಳು ಬಂದಿರುವ ಆರೋಪವೂ ಕೇಳಿಬಂದಿದೆ. ಕಾರ್ಯಕ್ರಮದ ಬುಕ್ಕಿಂಗ್ಗಾಗಿ ನೀಡಲಾಗಿದ್ದ ಮಹಿಳೆಯರ ಮೊಬೈಲ್ ಸಂಖ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕೆಲ ಕರೆಗಳು ವಿದೇಶಗಳಿಂದ ಬಂದಿರುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿ, ಸ್ಥಳೀಯ ಹಾಗೂ ವಿದೇಶ ಮೂಲದ ಕೆಲ ಶಕ್ತಿಗಳು ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ಜಗ್ಗದೆ ಸಮಾಜದಲ್ಲಿ ಜಾಗೃತಿ ಕಾರ್ಯ ಮುಂದುವರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಭದ್ರತೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm