ಬ್ರೇಕಿಂಗ್ ನ್ಯೂಸ್
06-03-26 12:17 pm supritha Jain ಕರಾವಳಿ
ಮಂಗಳೂರು, ಮಾರ್ಚ್ 06: ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ 2′ ಬಿಡುಗಡೆಗೂ ಮುನ್ನವೇ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿತ್ತು. ಚಿತ್ರದಲ್ಲಿನ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರದ ವಿಷಯಗಳ ಚಿತ್ರಣ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತದೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಇದರ ಸುತ್ತ ಹೊಸ ವಿವಾದಗಳು ಸೃಷ್ಟಿಯಾಗಿದೆ.
ಪುತ್ತೂರಿನ ಜಿಎಲ್ ಒನ್ ಮಾಲ್ನಲ್ಲಿ ಸೀತಾ ಪರಿವಾರ ಸಂಘಟನೆಯ ವತಿಯಿಂದ 16 ರಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸಿನಿಮಾ ಪ್ರದರ್ಶನ ಆಯೋಜಿಸಲಾಗಿತ್ತು. ನಿನ್ನೆ ಸಂಜೆ ಮೂರು ಪ್ರದರ್ಶನಗಳು ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕೆಲವು ರಾಜಕೀಯ ಹಾಗೂ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯಕ್ರಮದ ಕುರಿತು ವಿವಾದಾತ್ಮಕ ಸಂದೇಶಗಳು ಹರಿದಾಡಿದ್ದು, ಮಾಲ್ ಅನ್ನು ಬಹಿಷ್ಕರಿಸುವಂತೆ ಕೆಲವರು ಕರೆ ನೀಡಿರುವ ಆರೋಪಗಳು ಕೇಳಿಬಂದಿವೆ. ಜೊತೆಗೆ ಮುಸ್ಲಿಂ ಸಮುದಾಯದ ಯುವತಿಯರು ಮಾಲ್ಗೆ ಹೋಗುವಾಗ ಎಚ್ಚರಿಕೆ ವಹಿಸಬೇಕು ಎಂಬ ರೀತಿಯ ಸಂದೇಶಗಳೂ ವೈರಲ್ ಆಗಿದ್ದು, ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.
ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆಗಳು ಬಂದಿರುವ ಆರೋಪವೂ ಕೇಳಿಬಂದಿದೆ. ಕಾರ್ಯಕ್ರಮದ ಬುಕ್ಕಿಂಗ್ಗಾಗಿ ನೀಡಲಾಗಿದ್ದ ಮಹಿಳೆಯರ ಮೊಬೈಲ್ ಸಂಖ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕೆಲ ಕರೆಗಳು ವಿದೇಶಗಳಿಂದ ಬಂದಿರುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿ, ಸ್ಥಳೀಯ ಹಾಗೂ ವಿದೇಶ ಮೂಲದ ಕೆಲ ಶಕ್ತಿಗಳು ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ಜಗ್ಗದೆ ಸಮಾಜದಲ್ಲಿ ಜಾಗೃತಿ ಕಾರ್ಯ ಮುಂದುವರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಭದ್ರತೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm