ಬ್ರೇಕಿಂಗ್ ನ್ಯೂಸ್
06-03-26 04:08 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 06: ಸೈಬರ್ ಅಪರಾಧಿಗಳು ಇದೀಗ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಅವರ ಜೀವಮಾನದ ಉಳಿತಾಯಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೇ ರೀತಿಯ ಮತ್ತೊಂದು ಗಂಭೀರ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೊಬೈಲ್ ಹ್ಯಾಕ್ ಮಾಡಿ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರ ಖಾತೆಯಿಂದ ಬರೋಬ್ಬರಿ ₹28.46 ಲಕ್ಷ ಹಣವನ್ನು ದೋಚಿರುವುದು ಬೆಳಕಿಗೆ ಬಂದಿದೆ.
ಮೊಬೈಲ್ ಹ್ಯಾಕ್ ಮಾಡಿ ಹಣ ಲೂಟಿ ;
ಮಂಗಳೂರಿನ ನಿವಾಸಿಯಾಗಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಮಹಿಳೆಯೇ ವಂಚನೆಗೆ ಒಳಗಾದವರು. ಬ್ಯಾಂಕ್ ಸೇವೆಯಿಂದ ನಿವೃತ್ತಿಯಾದ ಬಳಿಕ ಅವರಿಗೆ ಬಂದ ನಿವೃತ್ತಿ ವೇತನದ ಹಣವನ್ನು ಯುನಿಯನ್ ಬ್ಯಾಂಕ್ ಆಫ್ ಇಂಡಿಯಾಯಲ್ಲಿರುವ ತಮ್ಮ ನಾಲ್ಕು ವಿಭಿನ್ನ ಖಾತೆಗಳಲ್ಲಿ ಜಮಾ ಮಾಡಿಟ್ಟಿದ್ದರು.
ಮಾರ್ಚ್ 3ರಂದು ರಾತ್ರಿ ಸುಮಾರು 9.30ರ ವೇಳೆಗೆ ಅವರ ಮೊಬೈಲ್ ಫೋನ್ ಅಚಾನಕ್ ಹ್ಯಾಕ್ ಆಗಿದೆ. ಮೊಬೈಲ್ ಹ್ಯಾಕ್ ಆದ ಬಳಿಕ ಫೋನ್ಗೆ ಬರುವ ಎಲ್ಲಾ ಇನ್ಕಮಿಂಗ್ ಕರೆಗಳು ಸ್ಥಗಿತಗೊಂಡಿವೆ. ಇದರಿಂದ ಅನುಮಾನಗೊಂಡ ಮಹಿಳೆ ಫೋನ್ ಪರಿಶೀಲಿಸುತ್ತಿದ್ದ ವೇಳೆ, ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುತ್ತಿರುವ ಕುರಿತು ಸರಣಿ ಎಸ್ಎಂಎಸ್ ಸಂದೇಶಗಳು ಬರತೊಡಗಿವೆ.
ನಾಲ್ಕು ಖಾತೆಗಳಿಂದ 28.46 ಲಕ್ಷ ವರ್ಗಾವಣೆ;
ಅಪರಿಚಿತ ಸೈಬರ್ ಕಳ್ಳರು ಮಹಿಳೆಯ ನಾಲ್ಕು ಬ್ಯಾಂಕ್ ಖಾತೆಗಳಿಂದ ಒಟ್ಟು 28,46,688 ಲಕ್ಷ ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿರುವುದು ತಿಳಿದುಬಂದಿದೆ.
ಹಣ ಕಟ್ ಆಗುತ್ತಿರುವುದು ಗೊತ್ತಾಗುತ್ತಿದ್ದಂತೆಯೇ ಮಹಿಳೆ ತಕ್ಷಣವೇ ಬ್ಯಾಂಕ್ ಹೆಲ್ಪ್ಲೈನ್ ಸಂಖ್ಯೆಗೆ ಕರೆ ಮಾಡಿ ತಮ್ಮ ಬ್ಯಾಂಕ್ ಖಾತೆಗಳು ಹಾಗೂ ಎಟಿಎಂ ಕಾರ್ಡ್ಗಳನ್ನು ಫ್ರೀಜ್ ಮಾಡಿಸಿದ್ದಾರೆ. ನಂತರ ರಾಷ್ಟ್ರೀಯ ಸೈಬರ್ ಅಪರಾಧ ಸಹಾಯವಾಣಿ 1930 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ. ಈ ತಕ್ಷಣದ ಕ್ರಮದಿಂದ ಇನ್ನಷ್ಟು ಹಣ ನಷ್ಟವಾಗುವುದನ್ನು ತಪ್ಪಿಸಲಾಗಿದೆ.
“ಯಾರೋ ಅಪರಿಚಿತ ವ್ಯಕ್ತಿಗಳು ನನ್ನ ಮೊಬೈಲ್ ಹ್ಯಾಕ್ ಮಾಡಿ, ನನ್ನ ಗಮನಕ್ಕೆ ಬಾರದೇ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದಾರೆ. ಪ್ರಕರಣವನ್ನು ಸೂಕ್ತವಾಗಿ ತನಿಖೆ ನಡೆಸಿ ಹಣವನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು” ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣ ವರ್ಗಾವಣೆಯಾದ ಖಾತೆಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am