ಬ್ರೇಕಿಂಗ್ ನ್ಯೂಸ್
06-03-26 07:01 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026–27ನೇ ಸಾಲಿನ ಬಜೆಟ್ನಲ್ಲಿ ಮೀನುಗಾರಿಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಮಹತ್ವದ ಕ್ರಮಗಳನ್ನು ಘೋಷಿಸಿದೆ. ಮೀನುಗಾರರ ಆರ್ಥಿಕ ಸ್ಥಿತಿ ಬಲಪಡಿಸುವುದು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.
ಮೀನುಗಾರರಿಗೆ ಸಲಕರಣೆ ಕಿಟ್ ಮೌಲ್ಯ ದ್ವಿಗುಣ:
ಮೀನುಗಾರರಿಗೆ ನೀಡುತ್ತಿದ್ದ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದರಿಂದ ಮೀನುಗಾರರು ಉತ್ತಮ ಗುಣಮಟ್ಟದ ಉಪಕರಣಗಳನ್ನು ಪಡೆದು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಲು ನೆರವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಸಮುದ್ರ ಕೃಷಿಗೆ ಸಂಶೋಧನಾ ಕೇಂದ್ರ:
ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಜೈವಿಕ ತಂತ್ರಜ್ಞಾನ, ಸಮುದ್ರ ಕೃಷಿ ಮತ್ತು ನವೀನ ತಂತ್ರಜ್ಞಾನಗಳ ಸಂಶೋಧನೆಗೆ ಈ ಕೇಂದ್ರ ವೇದಿಕೆಯಾಗಲಿದೆ.
ಮತ್ಸ್ಯದರ್ಶಿನಿ ಮಾರುಕಟ್ಟೆಗಳ ಸ್ಥಾಪನೆ:
ಮೀನು ಆಹಾರ ಬಳಕೆಯನ್ನು ಉತ್ತೇಜಿಸಲು ಹಾಗೂ ಗುಣಮಟ್ಟದ ಮೀನು ಉತ್ಪನ್ನಗಳನ್ನು ಲಭ್ಯವಾಗಿಸಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.
ಸುಸಜ್ಜಿತ ಮೀನು ಮಾರುಕಟ್ಟೆ ಅಭಿವೃದ್ಧಿ:
ಮೀನು ಮಾರಾಟ ವ್ಯವಸ್ಥೆಯನ್ನು ಬಲಪಡಿಸಲು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಆಧುನಿಕ ಮೀನು ಮಾರುಕಟ್ಟೆಗಳನ್ನು ನಿರ್ಮಿಸಲಾಗುವುದು. ಇದರಿಂದ ಮೀನುಗಾರರಿಗೆ ಉತ್ತಮ ಮಾರಾಟ ಅವಕಾಶ ಸಿಗಲಿದೆ. ಅಲ್ಲದೆ, ಮೀನುಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗಲು ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗೆ 20 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
ಒಳನಾಡು ಮೀನುಗಾರಿಕೆಗೆ ವಿಶೇಷ ಒತ್ತು:
ಗ್ರಾಮೀಣ ಪ್ರದೇಶಗಳ ಉದ್ಯೋಗ ಸೃಷ್ಟಿ ಮತ್ತು ಆಹಾರ ಭದ್ರತೆಗಾಗಿ ಒಳನಾಡು ಮೀನುಗಾರಿಕೆಯನ್ನು ಉತ್ತೇಜಿಸಲಾಗುವುದು. ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ಆಧುನಿಕ ತಂತ್ರಜ್ಞಾನ ತರಬೇತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಭರವಸೆ ನೀಡಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm