ಬ್ರೇಕಿಂಗ್ ನ್ಯೂಸ್
06-03-26 07:01 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026–27ನೇ ಸಾಲಿನ ಬಜೆಟ್ನಲ್ಲಿ ಮೀನುಗಾರಿಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಮಹತ್ವದ ಕ್ರಮಗಳನ್ನು ಘೋಷಿಸಿದೆ. ಮೀನುಗಾರರ ಆರ್ಥಿಕ ಸ್ಥಿತಿ ಬಲಪಡಿಸುವುದು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.
ಮೀನುಗಾರರಿಗೆ ಸಲಕರಣೆ ಕಿಟ್ ಮೌಲ್ಯ ದ್ವಿಗುಣ:
ಮೀನುಗಾರರಿಗೆ ನೀಡುತ್ತಿದ್ದ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದರಿಂದ ಮೀನುಗಾರರು ಉತ್ತಮ ಗುಣಮಟ್ಟದ ಉಪಕರಣಗಳನ್ನು ಪಡೆದು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಲು ನೆರವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಸಮುದ್ರ ಕೃಷಿಗೆ ಸಂಶೋಧನಾ ಕೇಂದ್ರ:
ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಜೈವಿಕ ತಂತ್ರಜ್ಞಾನ, ಸಮುದ್ರ ಕೃಷಿ ಮತ್ತು ನವೀನ ತಂತ್ರಜ್ಞಾನಗಳ ಸಂಶೋಧನೆಗೆ ಈ ಕೇಂದ್ರ ವೇದಿಕೆಯಾಗಲಿದೆ.
ಮತ್ಸ್ಯದರ್ಶಿನಿ ಮಾರುಕಟ್ಟೆಗಳ ಸ್ಥಾಪನೆ:
ಮೀನು ಆಹಾರ ಬಳಕೆಯನ್ನು ಉತ್ತೇಜಿಸಲು ಹಾಗೂ ಗುಣಮಟ್ಟದ ಮೀನು ಉತ್ಪನ್ನಗಳನ್ನು ಲಭ್ಯವಾಗಿಸಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.
ಸುಸಜ್ಜಿತ ಮೀನು ಮಾರುಕಟ್ಟೆ ಅಭಿವೃದ್ಧಿ:
ಮೀನು ಮಾರಾಟ ವ್ಯವಸ್ಥೆಯನ್ನು ಬಲಪಡಿಸಲು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಆಧುನಿಕ ಮೀನು ಮಾರುಕಟ್ಟೆಗಳನ್ನು ನಿರ್ಮಿಸಲಾಗುವುದು. ಇದರಿಂದ ಮೀನುಗಾರರಿಗೆ ಉತ್ತಮ ಮಾರಾಟ ಅವಕಾಶ ಸಿಗಲಿದೆ. ಅಲ್ಲದೆ, ಮೀನುಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗಲು ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗೆ 20 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
ಒಳನಾಡು ಮೀನುಗಾರಿಕೆಗೆ ವಿಶೇಷ ಒತ್ತು:
ಗ್ರಾಮೀಣ ಪ್ರದೇಶಗಳ ಉದ್ಯೋಗ ಸೃಷ್ಟಿ ಮತ್ತು ಆಹಾರ ಭದ್ರತೆಗಾಗಿ ಒಳನಾಡು ಮೀನುಗಾರಿಕೆಯನ್ನು ಉತ್ತೇಜಿಸಲಾಗುವುದು. ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ಆಧುನಿಕ ತಂತ್ರಜ್ಞಾನ ತರಬೇತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಭರವಸೆ ನೀಡಿದ್ದಾರೆ.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm