ಬ್ರೇಕಿಂಗ್ ನ್ಯೂಸ್
07-03-26 10:17 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 07: ಗಲ್ಫ್ ಯುದ್ಧದ ಕಾರಣ ಕಚ್ಚಾ ತೈಲದ ಕೊರತೆಯಿಂದ ಎಂಆರ್ ಪಿಎಲ್ ಘಟಕದ ಕೆಲವು ರಿಫೈನರಿ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಸಂಪೂರ್ಣ ತಳ್ಳಿಹಾಕಿದ್ದು ರಿಫೈನರಿಯ ಎಲ್ಲ ಕಾರ್ಯಾಚರಣೆಗಳು ಸಹಜ ರೀತಿಯಲ್ಲೇ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದೆ.
ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪ್ರಕಟವಾದ ಒಂದು ಪೋಸ್ಟ್ನಲ್ಲಿ ಗಲ್ಪ್ ಪ್ರದೇಶದ ಉದ್ವಿಗ್ನತೆಯಿಂದ ಕಚ್ಚಾ ತೈಲ ಸಾಗಣೆ ವಿಳಂಬವಾಗಿದ್ದು, ಮಂಗಳೂರಿನ 3 ಲಕ್ಷ ಬ್ಯಾರೆಲ್ ಸಾಮರ್ಥ್ಯದ ರಿಫೈನರಿಯ ಕೆಲವು ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಈ ಮಾಹಿತಿ ಸಂಪೂರ್ಣ ತಪ್ಪಾಗಿದೆ ಎಂದು ಎಂಆರ್ಪಿಎಲ್ ತಿಳಿಸಿದೆ.
ಕಂಪನಿಯ ಪ್ರಕಟಣೆಯ ಪ್ರಕಾರ, ಈ ರೀತಿಯ ವದಂತಿಗಳು ವಾಸ್ತವಕ್ಕೆ ದೂರವಾಗಿದ್ದು ರಿಫೈನರಿ ಸಾಮಾನ್ಯವಾಗಿ ಕಾರ್ಯ ನಿರ್ವಹಿಸುತ್ತಿದೆ. ರಿಫೈನರಿ ಕಾರ್ಯಾಚರಣೆ ಮುಂದುವರಿಸಲು ಬೇಕಾದಷ್ಟು ಕಚ್ಚಾ ತೈಲವನ್ನು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.
ರಿಫೈನರಿಯಲ್ಲಿ ಯಾವುದೇ ಘಟಕವನ್ನು ಸ್ಥಗಿತಗೊಳಿಸಿಲ್ಲ ಹಾಗೂ ಸಹಜ ಸಾಮರ್ಥ್ಯದಲ್ಲೇ ಕಾರ್ಯ ನಿರ್ವಹಣೆ ಮುಂದುವರಿದಿದೆ ಎಂದು ಎಂಆರ್ಪಿಎಲ್ ಹೇಳಿದೆ. ತಪ್ಪು ಮಾಹಿತಿಗಳು ಹರಡದಂತೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕಂಪನಿ ಮನವಿ ಮಾಡಿದೆ.
ಇದರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕೂಡ ತಳ್ಳಿ ಹಾಕಿದೆ. ದೇಶದಲ್ಲಿ ಸಾಕಷ್ಟು ಇಂಧನ ಸಂಗ್ರಹವಿದ್ದು, ಪೂರೈಕೆ ಮತ್ತು ವಿತರಣೆ ವ್ಯವಸ್ಥೆ ಸಾಮಾನ್ಯವಾಗಿ ನಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ.
ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳ ನಡುವೆಯೂ ಭಾರತದಲ್ಲಿ ಇಂಧನ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm