ಬ್ರೇಕಿಂಗ್ ನ್ಯೂಸ್
07-03-26 10:17 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 07: ಗಲ್ಫ್ ಯುದ್ಧದ ಕಾರಣ ಕಚ್ಚಾ ತೈಲದ ಕೊರತೆಯಿಂದ ಎಂಆರ್ ಪಿಎಲ್ ಘಟಕದ ಕೆಲವು ರಿಫೈನರಿ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಸಂಪೂರ್ಣ ತಳ್ಳಿಹಾಕಿದ್ದು ರಿಫೈನರಿಯ ಎಲ್ಲ ಕಾರ್ಯಾಚರಣೆಗಳು ಸಹಜ ರೀತಿಯಲ್ಲೇ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದೆ.
ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪ್ರಕಟವಾದ ಒಂದು ಪೋಸ್ಟ್ನಲ್ಲಿ ಗಲ್ಪ್ ಪ್ರದೇಶದ ಉದ್ವಿಗ್ನತೆಯಿಂದ ಕಚ್ಚಾ ತೈಲ ಸಾಗಣೆ ವಿಳಂಬವಾಗಿದ್ದು, ಮಂಗಳೂರಿನ 3 ಲಕ್ಷ ಬ್ಯಾರೆಲ್ ಸಾಮರ್ಥ್ಯದ ರಿಫೈನರಿಯ ಕೆಲವು ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಈ ಮಾಹಿತಿ ಸಂಪೂರ್ಣ ತಪ್ಪಾಗಿದೆ ಎಂದು ಎಂಆರ್ಪಿಎಲ್ ತಿಳಿಸಿದೆ.
ಕಂಪನಿಯ ಪ್ರಕಟಣೆಯ ಪ್ರಕಾರ, ಈ ರೀತಿಯ ವದಂತಿಗಳು ವಾಸ್ತವಕ್ಕೆ ದೂರವಾಗಿದ್ದು ರಿಫೈನರಿ ಸಾಮಾನ್ಯವಾಗಿ ಕಾರ್ಯ ನಿರ್ವಹಿಸುತ್ತಿದೆ. ರಿಫೈನರಿ ಕಾರ್ಯಾಚರಣೆ ಮುಂದುವರಿಸಲು ಬೇಕಾದಷ್ಟು ಕಚ್ಚಾ ತೈಲವನ್ನು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.
ರಿಫೈನರಿಯಲ್ಲಿ ಯಾವುದೇ ಘಟಕವನ್ನು ಸ್ಥಗಿತಗೊಳಿಸಿಲ್ಲ ಹಾಗೂ ಸಹಜ ಸಾಮರ್ಥ್ಯದಲ್ಲೇ ಕಾರ್ಯ ನಿರ್ವಹಣೆ ಮುಂದುವರಿದಿದೆ ಎಂದು ಎಂಆರ್ಪಿಎಲ್ ಹೇಳಿದೆ. ತಪ್ಪು ಮಾಹಿತಿಗಳು ಹರಡದಂತೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕಂಪನಿ ಮನವಿ ಮಾಡಿದೆ.
ಇದರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕೂಡ ತಳ್ಳಿ ಹಾಕಿದೆ. ದೇಶದಲ್ಲಿ ಸಾಕಷ್ಟು ಇಂಧನ ಸಂಗ್ರಹವಿದ್ದು, ಪೂರೈಕೆ ಮತ್ತು ವಿತರಣೆ ವ್ಯವಸ್ಥೆ ಸಾಮಾನ್ಯವಾಗಿ ನಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ.
ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳ ನಡುವೆಯೂ ಭಾರತದಲ್ಲಿ ಇಂಧನ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm