ಬ್ರೇಕಿಂಗ್ ನ್ಯೂಸ್
09-03-26 12:50 pm HK News Staffer ಕರಾವಳಿ
ಭಟ್ಕಳ, ಮಾರ್ಚ್ 9: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪಿದ ನಂತರ ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಮತ್ತೆ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗುವ ಸೂಚನೆ ಲಭಿಸಿದೆ. ನಿನ್ನೆ ಭಟ್ಕಳದಲ್ಲಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಹಿಂದುತ್ವದ ಪರ ಪ್ರಖರ ಭಾಷಣ ಮಾಡಿ ಗಮನ ಸೆಳೆದಿದ್ದಾರೆ.
ನಮ್ಮ ಇತಿಹಾಸದಲ್ಲಿ ಆಗಿಹೋದ ಶೇಕಡಾ 90ರಷ್ಟು ಋಷಿಗಳು ಬ್ರಾಹ್ಮಣರಲ್ಲ. ಶ್ರೇಷ್ಠ ಸಾಧನೆಗೈದ ವಾಲ್ಮೀಕಿ, ವಿಶ್ವಾಮಿತ್ರರೂ ಬ್ರಾಹ್ಮಣರಲ್ಲ. ಈ ದೇಶದಲ್ಲಿ ಜಾತಿಗೆ ಎಂದಿಗೂ ಬೆಲೆ ಇರಲಿಲ್ಲ, ಯೋಗ್ಯತೆಗೆ ಮಾತ್ರ ಬೆಲೆಯಿತ್ತು. ಇಂದು ಜಾತಿಗೆ ಬೆಲೆ ಕೊಟ್ಟಿದ್ದು ನಮ್ಮಂತಹ ಬುದ್ಧಿವಂತರು. ಇತಿಹಾಸ ಓದಿದರೆ ನಮ್ಮ ಹಿಂದಿನ ಸತ್ಯ ತಿಳಿಯುತ್ತದೆ ಎಂದರು.
ಜಾತ್ಯತೀತತೆ ಎಂದರೆ ಅದು ಹಿಂದುತ್ವ. ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲು ಅವಕಾಶ ನೀಡಿದ್ದೇವೆ ಎಂದರೆ ನಮಗಿಂತ ದೊಡ್ಡ ಜಾತ್ಯತೀತರು ಯಾರಿದ್ದಾರೆ? ತಾಕತ್ತಿದ್ದರೆ ಬಾಂಗ್ಲಾದೇಶಕ್ಕೆ ಹೋಗಿ ಜಾತ್ಯತೀತತೆಯ ಪಾಠ ಮಾಡಿ ಎಂದು ಸವಾಲು ಹಾಕಿದರು. ನಮ್ಮನ್ನು ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಸೋಲಿಸಿಲ್ಲ. ಹಿಂದೂಗಳನ್ನು ಸೋಲಿಸಿದ್ದು ನಮ್ಮವರೇ ಆದ ಜಯಚಂದ ಮತ್ತು ಮಲ್ಲಪ್ಪ ಶೆಟ್ಟಿಯಂತಹ ದ್ರೋಹಿಗಳು. ನಾವು ಒಂದಾಗದಿದ್ದರೆ ನಮ್ಮ ಪರಿಸ್ಥಿತಿ ‘ಗೋವಿಂದ ಗೋವಿಂದ’ ಆಗಲಿದೆ.
“ಆರ್.ಎಸ್.ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ಹುಲಿ-ಸಿಂಹವನ್ನು ಯಾರೂ ದೇವರಿಗೆ ಬಲಿ ಕೊಡಲ್ಲ, ಕುರಿಯನ್ನಷ್ಟೇ ಬಲಿ ಕೊಡೋದು. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು, ಮುಗಿಸಲು ಸಾಧ್ಯವಿಲ್ಲ ಎಂದು ತಮ್ಮ ಶೈಲಿಯಲ್ಲಿಯೇ ಗುಡುಗಿದರು. ಹಿಂದೂ ಧರ್ಮವು ಇಂದು ಜಾತಿ-ಜಾತಿಯಲ್ಲಿ ಬಿದ್ದು ಹೊರಳಾಡುತ್ತಿದೆ. ನಮಗೆ ಮುಸ್ಲಿಮರು ಅಥವಾ ಕ್ರೈಸ್ತರಿಂದ ಅಪಾಯ ಬಂದಿಲ್ಲ, ಬದಲಾಗಿ ನಮ್ಮೊಳಗಿನವರಿಂದಲೇ ನಮಗೆ ಹೆಚ್ಚಿನ ಅಪಾಯ ಎದುರಾಗಿದ್ದು.
ಇಂದು ಆಫ್ರಿಕಾದಲ್ಲಿ ನಮಗಿಂತ ಸುಂದರವಾಗಿ ಗಣೇಶ ಹಬ್ಬ ಆಚರಿಸುತ್ತಾರೆ. ಚೀನಾದ ಗ್ರಾಮೀಣ ಪ್ರದೇಶಗಳಲ್ಲಿ ಭಾರತೀಯರಿಗೆ ಅಪಾರ ಗೌರವವಿದೆ. ಜಗತ್ತು ನಮ್ಮತ್ತ ನೋಡುತ್ತಿದೆ, ನಾವಿಂದು ಎದ್ದು ನಿಲ್ಲಬೇಕಿದೆ ಎಂದು ಜನರನ್ನು ಅನಂತ ಕುಮಾರ್ ಹೆಗಡೆ ಒತ್ತಾಯಿಸಿದರು. ನಮ್ಮ ಯಾವುದೇ ಧರ್ಮಗ್ರಂಥಗಳಲ್ಲಿ ಜಾತಿ ವ್ಯವಸ್ಥೆಯ ಉಲ್ಲೇಖವಿಲ್ಲ. ನದಿ ಹರಿಯುವಾಗ ಕೊಳಕು ಸೇರಿಕೊಂಡಂತೆ, ಕಾಲಕ್ರಮೇಣ ಜಾತಿ ಎಂಬ ಕೊಳಕು ನಮ್ಮಲ್ಲಿ ಸೇರಿಕೊಂಡಿದೆ. ಅದನ್ನು ಸ್ವಚ್ಛಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಪ್ರಸ್ತುತ ಕಾಲಘಟ್ಟದಲ್ಲಿ ಕೇವಲ ತಮ್ಮ ಜಾತಿಯವರನ್ನು ಮಾತ್ರ ಗೌರವಿಸುವ 'ಜಾತಿ ಸಮ್ಮೇಳನಗಳು' ಫ್ಯಾಶನ್ ಆಗಿರುವುದು ಸಮಾಜದ ಏಕತೆಗೆ ಮಾರಕ ಎಂದು ಅವರು ಅಭಿಪ್ರಾಯಪಟ್ಟರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am