ಬ್ರೇಕಿಂಗ್ ನ್ಯೂಸ್
09-03-26 12:50 pm HK News Staffer ಕರಾವಳಿ
ಭಟ್ಕಳ, ಮಾರ್ಚ್ 9: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪಿದ ನಂತರ ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಮತ್ತೆ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗುವ ಸೂಚನೆ ಲಭಿಸಿದೆ. ನಿನ್ನೆ ಭಟ್ಕಳದಲ್ಲಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಹಿಂದುತ್ವದ ಪರ ಪ್ರಖರ ಭಾಷಣ ಮಾಡಿ ಗಮನ ಸೆಳೆದಿದ್ದಾರೆ.
ನಮ್ಮ ಇತಿಹಾಸದಲ್ಲಿ ಆಗಿಹೋದ ಶೇಕಡಾ 90ರಷ್ಟು ಋಷಿಗಳು ಬ್ರಾಹ್ಮಣರಲ್ಲ. ಶ್ರೇಷ್ಠ ಸಾಧನೆಗೈದ ವಾಲ್ಮೀಕಿ, ವಿಶ್ವಾಮಿತ್ರರೂ ಬ್ರಾಹ್ಮಣರಲ್ಲ. ಈ ದೇಶದಲ್ಲಿ ಜಾತಿಗೆ ಎಂದಿಗೂ ಬೆಲೆ ಇರಲಿಲ್ಲ, ಯೋಗ್ಯತೆಗೆ ಮಾತ್ರ ಬೆಲೆಯಿತ್ತು. ಇಂದು ಜಾತಿಗೆ ಬೆಲೆ ಕೊಟ್ಟಿದ್ದು ನಮ್ಮಂತಹ ಬುದ್ಧಿವಂತರು. ಇತಿಹಾಸ ಓದಿದರೆ ನಮ್ಮ ಹಿಂದಿನ ಸತ್ಯ ತಿಳಿಯುತ್ತದೆ ಎಂದರು.
ಜಾತ್ಯತೀತತೆ ಎಂದರೆ ಅದು ಹಿಂದುತ್ವ. ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲು ಅವಕಾಶ ನೀಡಿದ್ದೇವೆ ಎಂದರೆ ನಮಗಿಂತ ದೊಡ್ಡ ಜಾತ್ಯತೀತರು ಯಾರಿದ್ದಾರೆ? ತಾಕತ್ತಿದ್ದರೆ ಬಾಂಗ್ಲಾದೇಶಕ್ಕೆ ಹೋಗಿ ಜಾತ್ಯತೀತತೆಯ ಪಾಠ ಮಾಡಿ ಎಂದು ಸವಾಲು ಹಾಕಿದರು. ನಮ್ಮನ್ನು ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಸೋಲಿಸಿಲ್ಲ. ಹಿಂದೂಗಳನ್ನು ಸೋಲಿಸಿದ್ದು ನಮ್ಮವರೇ ಆದ ಜಯಚಂದ ಮತ್ತು ಮಲ್ಲಪ್ಪ ಶೆಟ್ಟಿಯಂತಹ ದ್ರೋಹಿಗಳು. ನಾವು ಒಂದಾಗದಿದ್ದರೆ ನಮ್ಮ ಪರಿಸ್ಥಿತಿ ‘ಗೋವಿಂದ ಗೋವಿಂದ’ ಆಗಲಿದೆ.
“ಆರ್.ಎಸ್.ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ಹುಲಿ-ಸಿಂಹವನ್ನು ಯಾರೂ ದೇವರಿಗೆ ಬಲಿ ಕೊಡಲ್ಲ, ಕುರಿಯನ್ನಷ್ಟೇ ಬಲಿ ಕೊಡೋದು. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು, ಮುಗಿಸಲು ಸಾಧ್ಯವಿಲ್ಲ ಎಂದು ತಮ್ಮ ಶೈಲಿಯಲ್ಲಿಯೇ ಗುಡುಗಿದರು. ಹಿಂದೂ ಧರ್ಮವು ಇಂದು ಜಾತಿ-ಜಾತಿಯಲ್ಲಿ ಬಿದ್ದು ಹೊರಳಾಡುತ್ತಿದೆ. ನಮಗೆ ಮುಸ್ಲಿಮರು ಅಥವಾ ಕ್ರೈಸ್ತರಿಂದ ಅಪಾಯ ಬಂದಿಲ್ಲ, ಬದಲಾಗಿ ನಮ್ಮೊಳಗಿನವರಿಂದಲೇ ನಮಗೆ ಹೆಚ್ಚಿನ ಅಪಾಯ ಎದುರಾಗಿದ್ದು.
ಇಂದು ಆಫ್ರಿಕಾದಲ್ಲಿ ನಮಗಿಂತ ಸುಂದರವಾಗಿ ಗಣೇಶ ಹಬ್ಬ ಆಚರಿಸುತ್ತಾರೆ. ಚೀನಾದ ಗ್ರಾಮೀಣ ಪ್ರದೇಶಗಳಲ್ಲಿ ಭಾರತೀಯರಿಗೆ ಅಪಾರ ಗೌರವವಿದೆ. ಜಗತ್ತು ನಮ್ಮತ್ತ ನೋಡುತ್ತಿದೆ, ನಾವಿಂದು ಎದ್ದು ನಿಲ್ಲಬೇಕಿದೆ ಎಂದು ಜನರನ್ನು ಅನಂತ ಕುಮಾರ್ ಹೆಗಡೆ ಒತ್ತಾಯಿಸಿದರು. ನಮ್ಮ ಯಾವುದೇ ಧರ್ಮಗ್ರಂಥಗಳಲ್ಲಿ ಜಾತಿ ವ್ಯವಸ್ಥೆಯ ಉಲ್ಲೇಖವಿಲ್ಲ. ನದಿ ಹರಿಯುವಾಗ ಕೊಳಕು ಸೇರಿಕೊಂಡಂತೆ, ಕಾಲಕ್ರಮೇಣ ಜಾತಿ ಎಂಬ ಕೊಳಕು ನಮ್ಮಲ್ಲಿ ಸೇರಿಕೊಂಡಿದೆ. ಅದನ್ನು ಸ್ವಚ್ಛಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಪ್ರಸ್ತುತ ಕಾಲಘಟ್ಟದಲ್ಲಿ ಕೇವಲ ತಮ್ಮ ಜಾತಿಯವರನ್ನು ಮಾತ್ರ ಗೌರವಿಸುವ 'ಜಾತಿ ಸಮ್ಮೇಳನಗಳು' ಫ್ಯಾಶನ್ ಆಗಿರುವುದು ಸಮಾಜದ ಏಕತೆಗೆ ಮಾರಕ ಎಂದು ಅವರು ಅಭಿಪ್ರಾಯಪಟ್ಟರು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm