ಬ್ರೇಕಿಂಗ್ ನ್ಯೂಸ್
09-03-26 02:53 pm HK News Staffer ಕರಾವಳಿ
ಉಳ್ಳಾಲ, ಮಾ.09: ಬೆಂಗಳೂರಿನ ಕಟ್ಟಡವೊಂದರಲ್ಲಿ ಎಸಿ ಜೋಡಣೆ ಕೆಲಸ ನಿರ್ವಹಿಸುತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಲಪಾಡಿ ನಿವಾಸಿಗಳಾದ ವಿಶ್ವನಾಥ್ ಮತ್ತು ಮೀನಾಕ್ಷಿ ದಂಪತಿ ಪುತ್ರ ಹರ್ಷಿತ್ ಪೂಜಾರಿ(32) ಮೃತ ಯುವಕ.
ವಿದೇಶದ ಶಿಪ್ಪಿಂಗ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಹರ್ಷಿತ್ ಮೂರು ತಿಂಗಳಿಗೊಮ್ಮೆ ಸಿಗುವ ರಜೆಯಲ್ಲಿ ಊರಿಗೆ ಮರಳುವಾಗ ತನ್ನ ಮೂಲ ಎಸಿ ಮೆಕ್ಯಾನಿಕ್ ಕೆಲಸವನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಅವರು ಸಂಬಂಧಿಯೋರ್ವರಿಗೆ ಎಸಿ ಮೆಕ್ಯಾನಿಕ್ ತರಬೇತಿ ನೀಡುವ ಸಲುವಾಗಿ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಬಹುಮಹಡಿ ಕಟ್ಟಡದಲ್ಲಿ ಎಸಿ ಜೋಡಣೆ ನಡೆಸುವ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಗಾಯಾಳು ಹರ್ಷಿತ್ ಅವರನ್ನ ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಾ.7 ರಂದು ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಕರೆತರುವ ಸಂದರ್ಭದಲ್ಲಿ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ಮೃತ ಹರ್ಷಿತ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಬೆಳಗ್ಗೆ ನಡೆದಿದೆ. ಹರ್ಷಿತ್ ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಎರಡು ವರ್ಷದ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ. ತಲಪಾಡಿ ಭಾಗದಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಹರ್ಷಿತ್ ಅವರು ಭಜನಾ ಮಂದಿರ ಹಾಗೂ ದೇವಸ್ಥಾನಗಳ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಹರ್ಷಿತ್ ಅವರ ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಕೂಡ ಭಾಗವಹಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am