ಬ್ರೇಕಿಂಗ್ ನ್ಯೂಸ್
09-03-26 07:29 pm HK News Staffer ಕರಾವಳಿ
ಮಂಗಳೂರು, ಮಾ.9: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ರದ್ದುಪಡಿಸಿತ್ತು. ಇದರಿಂದ ದುಬೈ, ಜೆದ್ದಾ ಮತ್ತು ದಮಾಮ್ಗೆ ಪ್ರಯಾಣಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಪೈಕಿ ಸೋಮವಾರ ಬೆಳಗ್ಗೆ 5:20ಕ್ಕೆ ತೆರಳಬೇಕಿದ್ದ ಮಂಗಳೂರು–ಜೆದ್ದಾ (ಐಎಕ್ಸ್ 845) ವಿಮಾನ ಹಾಗೂ ಸಂಜೆ 18:20ಕ್ಕೆ ಜೆದ್ದಾ–ಮಂಗಳೂರು (ಐಎಕ್ಸ್ 846) ವಿಮಾನ ಪ್ರಯಾಣ ರದ್ದುಗೊಂಡಿದೆ. ಅದೇ ರೀತಿ ಮಧ್ಯಾಹ್ನ 13:20ಕ್ಕೆ ತೆರಳಬೇಕಿದ್ದ ಮಂಗಳೂರು–ದುಬೈ (ಐಎಕ್ಸ್ 831) ಹಾಗೂ ರಾತ್ರಿ 22:10ಕ್ಕೆ ದುಬೈ–ಮಂಗಳೂರು (ಐಎಕ್ಸ್ 832) ವಿಮಾನ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.
ರಾತ್ರಿ 20:15ಕ್ಕೆ ಹೋಗಬೇಕಿದ್ದ ಮಂಗಳೂರು–ದುಬೈ (ಐಎಕ್ಸ್ 813) ಮತ್ತು ಮಾ.10ರಂದು ಬೆಳಗ್ಗೆ 4:55ಕ್ಕೆ ದುಬೈ–ಮಂಗಳೂರು (ಐಎಕ್ಸ್ 814) ವಿಮಾನಗಳೂ ರದ್ದಾಗಿವೆ. ಮಾ.9ರಂದು ರಾತ್ರಿ 23:10ಕ್ಕೆ ತೆರಳಬೇಕಿದ್ದ ಮಂಗಳೂರು– ದಮಾಮ್ (ಐಎಕ್ಸ್ 847) ಮತ್ತು ಮಾ.10ರಂದು ಬೆಳಗ್ಗೆ 9:25ಕ್ಕೆ ದಮಾಮ್–ಮಂಗಳೂರು ವಿಮಾನ ಸೇವೆಯೂ ಸ್ಥಗಿತಗೊಂಡಿದೆ. ಇದಲ್ಲದೆ ಮಾ.9ರಂದು ರಾತ್ರಿ 23:20ಕ್ಕೆ ಹೊರಡಬೇಕಿದ್ದ ಮಂಗಳೂರು–ದುಬೈ (ಎಯುಎಚ್) (ಐಎಕ್ಸ್ 815) ಮತ್ತು ಮಾ.10ರಂದು ಬೆಳಗ್ಗೆ 8:15ಕ್ಕೆ ದುಬೈ (ಎಯುಎಚ್)–ಮಂಗಳೂರು (ಐಎಕ್ಸ್ 816) ವಿಮಾನಗಳನ್ನೂ ರದ್ದುಗೊಳಿಸಲಾಗಿದೆ.
ಇದರ ಜೊತೆಗೆ ಇಂಡಿಗೊ ವಿಮಾನಗಳಲ್ಲೂ ವ್ಯತ್ಯಯ ಉಂಟಾಗಿದೆ. ಮಾ.9ರಂದು ಬೆಳಗ್ಗೆ 5:20ಕ್ಕೆ ದುಬೈ–ಮಂಗಳೂರು (6ಇ 1437) ಮತ್ತು ರಾತ್ರಿ 21:15ಕ್ಕೆ ಮಂಗಳೂರು–ದುಬೈ (6ಇ 1438) ವಿಮಾನಗಳು ರದ್ದಾಗಿವೆ. ಜೊತೆಗೆ ಸಂಜೆ 19:35ಕ್ಕೆ ಹೊರಡಬೇಕಿದ್ದ ಬೆಂಗಳೂರು–ಮಂಗಳೂರು (6ಇ 578) ವಿಮಾನವೂ ಕಾರ್ಯ ನಿರ್ವಹಿಸುವುದಿಲ್ಲ ಎಂದು ಮಂಗಳೂರು ವಿಮಾನ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ವಿಮಾನಗಳ ಸಂಚಾರ ರದ್ದುಗೊಂಡಿದ್ದರಿಂದ ವಿದೇಶಿ ಪ್ರಯಾಣಕ್ಕೆ ಕಾಯುತ್ತಿದ್ದ ಪ್ರಯಾಣಿಕರು ತೊಂದರೆಗೀಡಾಗಿದ್ದಾರೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ಮಧ್ಯಪ್ರಾಚ್ಯ ದೇಶಗಳಿಗೆ ತೆರಳಬೇಕಿದ್ದ ಹಾಗೂ ಅಲ್ಲಿಂದ ಬರಬೇಕಿದ್ದ ಒಟ್ಟು 19 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು. ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ಗೆ ವಿವಿಧ ದೇಶಗಳಿಂದ ಆಗಮಿಸಬೇಕಿದ್ದ 9 ವಿಮಾನಗಳನ್ನು ರದ್ದುಗೊಳಿಸಿದ್ದರೆ, ಬೆಂಗಳೂರಿನಿಂದ ಹೊರ ದೇಶಗಳಿಗೆ ತೆರಳಬೇಕಿದ್ದ 10 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುವ ಸ್ಥಿತಿಯಾಗಿದೆ.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm