ಬ್ರೇಕಿಂಗ್ ನ್ಯೂಸ್
09-03-26 07:29 pm HK News Staffer ಕರಾವಳಿ
ಮಂಗಳೂರು, ಮಾ.9: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ರದ್ದುಪಡಿಸಿತ್ತು. ಇದರಿಂದ ದುಬೈ, ಜೆದ್ದಾ ಮತ್ತು ದಮಾಮ್ಗೆ ಪ್ರಯಾಣಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಪೈಕಿ ಸೋಮವಾರ ಬೆಳಗ್ಗೆ 5:20ಕ್ಕೆ ತೆರಳಬೇಕಿದ್ದ ಮಂಗಳೂರು–ಜೆದ್ದಾ (ಐಎಕ್ಸ್ 845) ವಿಮಾನ ಹಾಗೂ ಸಂಜೆ 18:20ಕ್ಕೆ ಜೆದ್ದಾ–ಮಂಗಳೂರು (ಐಎಕ್ಸ್ 846) ವಿಮಾನ ಪ್ರಯಾಣ ರದ್ದುಗೊಂಡಿದೆ. ಅದೇ ರೀತಿ ಮಧ್ಯಾಹ್ನ 13:20ಕ್ಕೆ ತೆರಳಬೇಕಿದ್ದ ಮಂಗಳೂರು–ದುಬೈ (ಐಎಕ್ಸ್ 831) ಹಾಗೂ ರಾತ್ರಿ 22:10ಕ್ಕೆ ದುಬೈ–ಮಂಗಳೂರು (ಐಎಕ್ಸ್ 832) ವಿಮಾನ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.
ರಾತ್ರಿ 20:15ಕ್ಕೆ ಹೋಗಬೇಕಿದ್ದ ಮಂಗಳೂರು–ದುಬೈ (ಐಎಕ್ಸ್ 813) ಮತ್ತು ಮಾ.10ರಂದು ಬೆಳಗ್ಗೆ 4:55ಕ್ಕೆ ದುಬೈ–ಮಂಗಳೂರು (ಐಎಕ್ಸ್ 814) ವಿಮಾನಗಳೂ ರದ್ದಾಗಿವೆ. ಮಾ.9ರಂದು ರಾತ್ರಿ 23:10ಕ್ಕೆ ತೆರಳಬೇಕಿದ್ದ ಮಂಗಳೂರು– ದಮಾಮ್ (ಐಎಕ್ಸ್ 847) ಮತ್ತು ಮಾ.10ರಂದು ಬೆಳಗ್ಗೆ 9:25ಕ್ಕೆ ದಮಾಮ್–ಮಂಗಳೂರು ವಿಮಾನ ಸೇವೆಯೂ ಸ್ಥಗಿತಗೊಂಡಿದೆ. ಇದಲ್ಲದೆ ಮಾ.9ರಂದು ರಾತ್ರಿ 23:20ಕ್ಕೆ ಹೊರಡಬೇಕಿದ್ದ ಮಂಗಳೂರು–ದುಬೈ (ಎಯುಎಚ್) (ಐಎಕ್ಸ್ 815) ಮತ್ತು ಮಾ.10ರಂದು ಬೆಳಗ್ಗೆ 8:15ಕ್ಕೆ ದುಬೈ (ಎಯುಎಚ್)–ಮಂಗಳೂರು (ಐಎಕ್ಸ್ 816) ವಿಮಾನಗಳನ್ನೂ ರದ್ದುಗೊಳಿಸಲಾಗಿದೆ.
ಇದರ ಜೊತೆಗೆ ಇಂಡಿಗೊ ವಿಮಾನಗಳಲ್ಲೂ ವ್ಯತ್ಯಯ ಉಂಟಾಗಿದೆ. ಮಾ.9ರಂದು ಬೆಳಗ್ಗೆ 5:20ಕ್ಕೆ ದುಬೈ–ಮಂಗಳೂರು (6ಇ 1437) ಮತ್ತು ರಾತ್ರಿ 21:15ಕ್ಕೆ ಮಂಗಳೂರು–ದುಬೈ (6ಇ 1438) ವಿಮಾನಗಳು ರದ್ದಾಗಿವೆ. ಜೊತೆಗೆ ಸಂಜೆ 19:35ಕ್ಕೆ ಹೊರಡಬೇಕಿದ್ದ ಬೆಂಗಳೂರು–ಮಂಗಳೂರು (6ಇ 578) ವಿಮಾನವೂ ಕಾರ್ಯ ನಿರ್ವಹಿಸುವುದಿಲ್ಲ ಎಂದು ಮಂಗಳೂರು ವಿಮಾನ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ವಿಮಾನಗಳ ಸಂಚಾರ ರದ್ದುಗೊಂಡಿದ್ದರಿಂದ ವಿದೇಶಿ ಪ್ರಯಾಣಕ್ಕೆ ಕಾಯುತ್ತಿದ್ದ ಪ್ರಯಾಣಿಕರು ತೊಂದರೆಗೀಡಾಗಿದ್ದಾರೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ಮಧ್ಯಪ್ರಾಚ್ಯ ದೇಶಗಳಿಗೆ ತೆರಳಬೇಕಿದ್ದ ಹಾಗೂ ಅಲ್ಲಿಂದ ಬರಬೇಕಿದ್ದ ಒಟ್ಟು 19 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು. ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ಗೆ ವಿವಿಧ ದೇಶಗಳಿಂದ ಆಗಮಿಸಬೇಕಿದ್ದ 9 ವಿಮಾನಗಳನ್ನು ರದ್ದುಗೊಳಿಸಿದ್ದರೆ, ಬೆಂಗಳೂರಿನಿಂದ ಹೊರ ದೇಶಗಳಿಗೆ ತೆರಳಬೇಕಿದ್ದ 10 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುವ ಸ್ಥಿತಿಯಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am