ಬ್ರೇಕಿಂಗ್ ನ್ಯೂಸ್
09-03-26 09:52 pm HK News Staffer ಕರಾವಳಿ
ಉಳ್ಳಾಲ, ಮಾ.09: ಸುಡುವ ಬಿರು ಬಿಸಿಲಿಗೆ ಮನುಷ್ಯರಲ್ಲದೆ ಮೂಕ ಪ್ರಾಣಿಗಳು ಸಹ ಬಾಯಾರಿಕೆಯಿಂದ ತತ್ತರಿಸುತ್ತಿವೆ. ಬೇಸಿಗೆಯ ಬಿಸಿಲ ಧಗೆಯನ್ನ ತಾಳಲಾರದೆ ಅತ್ತಿತ್ತ ಅಲೆದಾಡುತ್ತಿದ್ದ ಅಳಿಲಿಗೆ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಸಿಬ್ಬಂದಿಯೋರ್ವರು ನೀರು ಕುಡಿಸಿದ್ದು, ದಣಿವಾರಿಸಿಕೊಂಡ ಅಳಿಲು ಪೊಲೀಸಪ್ಪನ ಜೊತೆ ಸ್ನೇಹ ಬೆಳೆಸಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಸಿಬ್ಬಂದಿ ರಮೇಶ್ ಅಸಂಗಿ ಭಾನುವಾರ ಮಂಗಳೂರು ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅವರ ಬೈಕಿನ ಚಕ್ರದ ಮೇಲೆ ದಣಿವಿನಿಂದ ಓಡಾಡುತ್ತಿದ್ದ ಅಳಿಲನ್ನ ಗಮನಿಸಿದ್ದಾರೆ. ತಕ್ಷಣ ತನ್ನ ನೀರಿನ ಬಾಟಲಿಯ ಮುಚ್ಚಳಕ್ಕೆ ನೀರು ಸುರಿದು ಅಳಿಲಿಗೆ ಕುಡಿಸಲು ಪ್ರಯತ್ನಿಸಿದ್ದಾರೆ. ಆರಂಭದಲ್ಲಿ ಅಳಿಲು ಹತ್ತಿರ ಬರಲು ನಿರಾಕರಿಸಿದ್ದು ಬಳಿಕ ರಮೇಶ್ ಅವರ ಕಾಳಜಿಗೆ ಮನಸೋತು ನೀರನ್ನು ಕುಡಿದು ದಣಿವು ನೀಗಿಸಿಕೊಂಡಿದೆ. ದಣಿವನ್ನ ನೀಗಿಸಿಕೊಂಡ ಅಳಿಲು ಮತ್ತೆಲ್ಲೂ ಹೋಗದೆ ರಮೇಶ್ ಅಸಂಗಿ ಅವರ ಜೊತೆಯಲ್ಲೇ ಬಂದಿದ್ದು, ಆ ಅಳಿಲನ್ನ ರಮೇಶ್ ಅವರು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಅಳಿಲಿಗೆ ನೀರುಣಿಸುವ ದೃಶ್ಯವನ್ನು ಮಹೇಶ್ ಅವರು ತಮ್ಮ ಮೊಬೈಲಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಬಿರು ಬಿಸಿಲಿಗೆ ಮೈಯೊಡ್ಡಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ಮೂಕ ಪ್ರಾಣಿಯ ಮೇಲೆ ತೋರಿದ ಕಾಳಜಿಗೆ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದಲ್ಲದೆ, ಮನುಷ್ಯ ಮತ್ತು ಮೂಕ ಪ್ರಾಣಿಯ ನಡುವಿನ ನಿಷ್ಕಲ್ಮಶ ಪ್ರೀತಿಗೂ ಜನರು ಮನಸೋತಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm