ಬ್ರೇಕಿಂಗ್ ನ್ಯೂಸ್
09-03-26 09:52 pm HK News Staffer ಕರಾವಳಿ
ಉಳ್ಳಾಲ, ಮಾ.09: ಸುಡುವ ಬಿರು ಬಿಸಿಲಿಗೆ ಮನುಷ್ಯರಲ್ಲದೆ ಮೂಕ ಪ್ರಾಣಿಗಳು ಸಹ ಬಾಯಾರಿಕೆಯಿಂದ ತತ್ತರಿಸುತ್ತಿವೆ. ಬೇಸಿಗೆಯ ಬಿಸಿಲ ಧಗೆಯನ್ನ ತಾಳಲಾರದೆ ಅತ್ತಿತ್ತ ಅಲೆದಾಡುತ್ತಿದ್ದ ಅಳಿಲಿಗೆ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಸಿಬ್ಬಂದಿಯೋರ್ವರು ನೀರು ಕುಡಿಸಿದ್ದು, ದಣಿವಾರಿಸಿಕೊಂಡ ಅಳಿಲು ಪೊಲೀಸಪ್ಪನ ಜೊತೆ ಸ್ನೇಹ ಬೆಳೆಸಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಸಿಬ್ಬಂದಿ ರಮೇಶ್ ಅಸಂಗಿ ಭಾನುವಾರ ಮಂಗಳೂರು ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅವರ ಬೈಕಿನ ಚಕ್ರದ ಮೇಲೆ ದಣಿವಿನಿಂದ ಓಡಾಡುತ್ತಿದ್ದ ಅಳಿಲನ್ನ ಗಮನಿಸಿದ್ದಾರೆ. ತಕ್ಷಣ ತನ್ನ ನೀರಿನ ಬಾಟಲಿಯ ಮುಚ್ಚಳಕ್ಕೆ ನೀರು ಸುರಿದು ಅಳಿಲಿಗೆ ಕುಡಿಸಲು ಪ್ರಯತ್ನಿಸಿದ್ದಾರೆ. ಆರಂಭದಲ್ಲಿ ಅಳಿಲು ಹತ್ತಿರ ಬರಲು ನಿರಾಕರಿಸಿದ್ದು ಬಳಿಕ ರಮೇಶ್ ಅವರ ಕಾಳಜಿಗೆ ಮನಸೋತು ನೀರನ್ನು ಕುಡಿದು ದಣಿವು ನೀಗಿಸಿಕೊಂಡಿದೆ. ದಣಿವನ್ನ ನೀಗಿಸಿಕೊಂಡ ಅಳಿಲು ಮತ್ತೆಲ್ಲೂ ಹೋಗದೆ ರಮೇಶ್ ಅಸಂಗಿ ಅವರ ಜೊತೆಯಲ್ಲೇ ಬಂದಿದ್ದು, ಆ ಅಳಿಲನ್ನ ರಮೇಶ್ ಅವರು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಅಳಿಲಿಗೆ ನೀರುಣಿಸುವ ದೃಶ್ಯವನ್ನು ಮಹೇಶ್ ಅವರು ತಮ್ಮ ಮೊಬೈಲಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಬಿರು ಬಿಸಿಲಿಗೆ ಮೈಯೊಡ್ಡಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ಮೂಕ ಪ್ರಾಣಿಯ ಮೇಲೆ ತೋರಿದ ಕಾಳಜಿಗೆ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದಲ್ಲದೆ, ಮನುಷ್ಯ ಮತ್ತು ಮೂಕ ಪ್ರಾಣಿಯ ನಡುವಿನ ನಿಷ್ಕಲ್ಮಶ ಪ್ರೀತಿಗೂ ಜನರು ಮನಸೋತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am