ಕುತ್ತಾರಿ‌ನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ದಾರುಣ ಸಾವು

11-03-26 03:25 pm       HK News Staffer   ಕರಾವಳಿ

ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುತ್ತಾರು ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತಪಟ್ಟ ವ್ಯಕ್ತಿ.

ಉಳ್ಳಾಲ, ಮಾ.11: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುತ್ತಾರು ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತಪಟ್ಟ ವ್ಯಕ್ತಿ. 

ದಿನೇಶ್ ಗಟ್ಟಿ ಅವರು ಮಂಗಳವಾರ ರಾತ್ರಿ ಮದನಿ ನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೂಡ ರಸ್ತೆಗೆಯಲ್ಪಟ್ಟಿದ್ದು ತಕ್ಷಣವೇ ಆತ ಬೈಕ್ ಏರಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಂಭೀರ ಗಾಯಗೊಂಡಿದ್ದ ದಿನೇಶ್ ಗಟ್ಟಿ ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನೆ ಸಂಬಂಧಿಸಿ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.