ಬ್ರೇಕಿಂಗ್ ನ್ಯೂಸ್
11-03-26 06:26 pm HK News Staffer ಕರಾವಳಿ
ಪುತ್ತೂರು, ಮಾರ್ಚ್ 11: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೂರೈಕೆ ಕೊರತೆಯಿಂದಾಗಿ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.
ದೇವಸ್ಥಾನದಲ್ಲಿ ಪ್ರತಿ ದಿನ ಬೆಳಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನದ ಆಡಳಿತ ಈ ಕ್ರಮ ಕೈಗೊಂಡಿದೆ.
ದೇವಸ್ಥಾನದಲ್ಲಿ ಸದ್ಯಕ್ಕೆ ಕೇವಲ ಮೂರು ದಿನಗಳಿಗೆ ಆಗುವಷ್ಟು ಮಾತ್ರ ಅನಿಲ ದಾಸ್ತಾನು ಲಭ್ಯವಿದೆ. ಅಷ್ಟರೊಳಗೆ ಪೂರೈಕೆ ಸಹಜ ಸ್ಥಿತಿಗೆ ಬಾರದಿದ್ದಲ್ಲಿ ಭಕ್ತರಿಗೆ ನೀಡಲಾಗುವ ಮಧ್ಯಾಹ್ನದ ಭೋಜನ ಪ್ರಸಾದದ ಮೇಲೂ ಪರಿಣಾಮ ಬೀರಲಿದೆ. ಈಗಾಗಲೇ ಅನಿಲ ಪೂರೈಕೆ ಸಂಸ್ಥೆಗೆ ದಿನಕ್ಕೆ ಕನಿಷ್ಠ 20 ಸಿಲಿಂಡರ್ಗಳನ್ನು ಒದಗಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ತುರ್ತು ಪತ್ರ ಬರೆದಿದೆ.
ಮಧ್ಯಾಹ್ನದ ಭೋಜನಕ್ಕೂ ಸಂಕಷ್ಟ?
ಒಂದು ವೇಳೆ ಗ್ಯಾಸ್ ಪೂರೈಕೆ ಪುನರಾರಂಭಗೊಳ್ಳದಿದ್ದರೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭಕ್ತರಿಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm