ಬ್ರೇಕಿಂಗ್ ನ್ಯೂಸ್
12-03-26 02:44 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 12: ಮ್ಯೂಲ್ ಅಕೌಂಟ್ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ ಎಂಬವರನ್ನು ಬಂಧಿಸಲಾಗಿದೆ.
ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್ಗಳು, 18 ಡೆಬಿಟ್ ಕಾರ್ಡ್ಗಳು, 17 ಬ್ಯಾಂಕ್ ಪಾಸ್ಬುಕ್ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ), 1 ಕಾರನ್ನು ವಶಕ್ಕೆ ಪಡೆಯಲಾಗಿದೆ.
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ:
ಚೀನಾ ಲಿಂಕ್ ಹೊಂದಿರುವ ಮ್ಯೂಲ್ ಅಕೌಂಟ್ ದಂಧೆ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ, ಬಂಧಿತ ಆರೋಪಿಗಳು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿಯನ್ನು ಖರೀದಿ ಮಾಡುತ್ತಿದ್ದರು. ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಅವರು ಚೀನಾದ ಸೈಬರ್ ವಂಚಕರೊಂದಿಗೆ ಸಂಪರ್ಕದಲ್ಲಿದ್ದು, ಬಳಿಕ ಅದೇ ಕ್ರಿಪ್ಟೋಕರೆನ್ಸಿಯನ್ನು ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕ್ರಿಪ್ಟೊ ವ್ಯವಹಾರದ ಬದಲಾಗಿ ಆರೋಪಿಗಳು ರೂಪಾಯಿ ರೂಪದಲ್ಲಿ ಹಣವನ್ನು ವಾಪಸ್ ಪಡೆಯುತ್ತಿದ್ದರು. ಇದಕ್ಕಾಗಿ ಮಂಗಳೂರು ನಗರದ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸುತ್ತಿದ್ದರು.
ಸುಮಾರು 70ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ ಚೀನಾದವರಿಗೆ ನೀಡಲಾಗಿತ್ತು. ನಂತರ ಚೀನಾದ ಸೈಬರ್ ವಂಚಕರು ಆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು. ಆದರೆ ಆ ಹಣ ಸೈಬರ್ ವಂಚನೆಯ ಮೂಲಕ ಪಡೆದದ್ದಾಗಿತ್ತು ಎಂದು ತಿಳಿದುಬಂದಿದೆ. ಚೀನಾದವರ ಸೈಬರ್ ವಂಚನೆ ಬಗ್ಗೆ ಆರೋಪಿಗಳಿಗೆ ತಿಳಿದಿದ್ದರೂ ಸಹ, ಹಣದ ಆಸೆಗೆ ಅವರು ಅವರಿಗೆ ಸಾಥ್ ನೀಡಿದ್ದಾರೆ. ಪ್ರಕರಣದಲ್ಲಿ ಬಳಸಲಾಗಿದ್ದ 37 ಬ್ಯಾಂಕ್ ಖಾತೆಗಳ ವಿರುದ್ಧ ದೇಶದಾದ್ಯಂತ 88ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am