ಬ್ರೇಕಿಂಗ್ ನ್ಯೂಸ್
12-03-26 02:44 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 12: ಮ್ಯೂಲ್ ಅಕೌಂಟ್ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ ಎಂಬವರನ್ನು ಬಂಧಿಸಲಾಗಿದೆ.
ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್ಗಳು, 18 ಡೆಬಿಟ್ ಕಾರ್ಡ್ಗಳು, 17 ಬ್ಯಾಂಕ್ ಪಾಸ್ಬುಕ್ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ), 1 ಕಾರನ್ನು ವಶಕ್ಕೆ ಪಡೆಯಲಾಗಿದೆ.
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ:
ಚೀನಾ ಲಿಂಕ್ ಹೊಂದಿರುವ ಮ್ಯೂಲ್ ಅಕೌಂಟ್ ದಂಧೆ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ, ಬಂಧಿತ ಆರೋಪಿಗಳು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿಯನ್ನು ಖರೀದಿ ಮಾಡುತ್ತಿದ್ದರು. ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಅವರು ಚೀನಾದ ಸೈಬರ್ ವಂಚಕರೊಂದಿಗೆ ಸಂಪರ್ಕದಲ್ಲಿದ್ದು, ಬಳಿಕ ಅದೇ ಕ್ರಿಪ್ಟೋಕರೆನ್ಸಿಯನ್ನು ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕ್ರಿಪ್ಟೊ ವ್ಯವಹಾರದ ಬದಲಾಗಿ ಆರೋಪಿಗಳು ರೂಪಾಯಿ ರೂಪದಲ್ಲಿ ಹಣವನ್ನು ವಾಪಸ್ ಪಡೆಯುತ್ತಿದ್ದರು. ಇದಕ್ಕಾಗಿ ಮಂಗಳೂರು ನಗರದ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸುತ್ತಿದ್ದರು.
ಸುಮಾರು 70ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ ಚೀನಾದವರಿಗೆ ನೀಡಲಾಗಿತ್ತು. ನಂತರ ಚೀನಾದ ಸೈಬರ್ ವಂಚಕರು ಆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು. ಆದರೆ ಆ ಹಣ ಸೈಬರ್ ವಂಚನೆಯ ಮೂಲಕ ಪಡೆದದ್ದಾಗಿತ್ತು ಎಂದು ತಿಳಿದುಬಂದಿದೆ. ಚೀನಾದವರ ಸೈಬರ್ ವಂಚನೆ ಬಗ್ಗೆ ಆರೋಪಿಗಳಿಗೆ ತಿಳಿದಿದ್ದರೂ ಸಹ, ಹಣದ ಆಸೆಗೆ ಅವರು ಅವರಿಗೆ ಸಾಥ್ ನೀಡಿದ್ದಾರೆ. ಪ್ರಕರಣದಲ್ಲಿ ಬಳಸಲಾಗಿದ್ದ 37 ಬ್ಯಾಂಕ್ ಖಾತೆಗಳ ವಿರುದ್ಧ ದೇಶದಾದ್ಯಂತ 88ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am