ಬ್ರೇಕಿಂಗ್ ನ್ಯೂಸ್
13-03-26 01:51 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 13 : ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿರುವ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟಪಡಿಸಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಡಿ. ನಾಗರಾಜ್ ಮಾತನಾಡಿ, ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ತಾತ್ಕಾಲಿಕ ನಿಲ್ಲಿಸಿರುವುದರಿಂದ ಹೋಟೆಲ್ಗಳು, ದೇವಸ್ಥಾನಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಸಿಲಿಂಡರ್ ಬಳಸುವ ಸಂಸ್ಥೆಗಳಿಗೆ ಮಾತ್ರ ತೊಂದರೆ ಉಂಟಾಗಿದೆಯೇ ಹೊರತು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದಿದ್ದಾರೆ.
“ಗೃಹ ಬಳಕೆಯ ಎಲ್ಪಿಜಿ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಕೇಂದ್ರ ಸರ್ಕಾರದ ಸೂಚನೆಯಂತೆ ವಾಣಿಜ್ಯ ಸಂಸ್ಥೆಗಳಿಗೆ ಸಿಲಿಂಡರ್ ಪೂರೈಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇದರಿಂದ ವಾಣಿಜ್ಯ ಬಳಕೆದಾರರಿಗೆ ಮಾತ್ರ ಸಮಸ್ಯೆ ಎದುರಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 6,22,454 ಗೃಹ ಬಳಕೆಯ ಎಲ್ಪಿಜಿ ಸಂಪರ್ಕಗಳು ಇದ್ದು, ಸರಬರಾಜಿನಲ್ಲಿ ಯಾವುದೇ ವಿಳಂಬ ಅಥವಾ ವ್ಯತ್ಯಯ ಕುರಿತು ದೂರುಗಳು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಜಿಲ್ಲೆಯಲ್ಲಿ ಇರುವ 38,787 ವಾಣಿಜ್ಯ ಸಂಪರ್ಕಗಳಿಗೆ ಮಾತ್ರ ಸರಬರಾಜು ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಹಲವಾರು ಹೋಟೆಲ್ಗಳು, ದೇವಸ್ಥಾನಗಳು ಹಾಗೂ ಕ್ಯಾಟರಿಂಗ್ ಸೇವೆಗಳು ಪರ್ಯಾಯವಾಗಿ ಕಟ್ಟಿಗೆ ಬಳಕೆ ಮಾಡುವ ಪರಿಸ್ಥಿತಿ ಎದುರಾಗಿದೆ. ನಗರದ ಕಟ್ಟಿಗೆ ಮಾರಾಟ ಅಂಗಡಿಗಳಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಾರ ಹೆಚ್ಚಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ವ್ಯಾಪಾರಿಗಳ ಪ್ರಕಾರ, ಎಲ್ಪಿಜಿ ಬಳಕೆ ಹೆಚ್ಚಾದ ಬಳಿಕ ಕಟ್ಟಿಗೆ ಬೇಡಿಕೆ ಕುಸಿತವಾಗಿತ್ತು. ಆದರೆ ಈಗ ಮತ್ತೆ ಕಟ್ಟಿಗೆಗೆ ಬೇಡಿಕೆ ಬರುತ್ತಿದ್ದು, ಪ್ರಸ್ತುತ 100 ಕಿಲೋ ವಿಭಜಿತ ಕಟ್ಟಿಗೆಗೆ ಸುಮಾರು ₹1,000 ದರ ಇದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಕೊರತೆ ಇಲ್ಲ:
ಈ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಮಣಿಪಾಲದಲ್ಲಿ ಎಲ್ಪಿಜಿ ಏಜೆನ್ಸಿಗಳ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಹೆಚ್ಚಿನ ಮನೆಗಳಿಗೆ ಎರಡು ಅನಿಲ ಸಂಪರ್ಕಗಳಿದ್ದು, ಒಂದೇ ಸಿಲಿಂಡರ್ ಇರುವ ಮನೆಗಳಿಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ಗೃಹ ಮತ್ತು ವಾಣಿಜ್ಯ ಸಿಲಿಂಡರ್ಗಳ ಅಕ್ರಮ ಮಾರಾಟ, ಸಂಗ್ರಹ, ಸಾಗಣೆ ಅಥವಾ ದುರುಪಯೋಗ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am