Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಟ್ರಾಫಿಕ್ ಜಾಮ್, ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

16-03-26 02:46 pm       HK News Staffer   ಕರಾವಳಿ

ಪಡುಬಿದ್ರಿಯ ಕಟಪಾಡಿ ಬಳಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದುಸ್ತಾನ್ ಪೆಟ್ರೋಲಿಯಂ ಕಂಪೆನಿಗೆ ಸೇರಿದ ಗ್ಯಾಸ್ ಟ್ಯಾಂಕ‌ರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದು ಟ್ರಾಫಿಕ್ ಜಾಮ್ ಆಗಿದೆ. ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುರಕ್ಷತೆಗಾಗಿ ಸಂಚಾರಕ್ಕೆ ಪರ್ಯಾಯ ರಸ್ತೆ ಸೂಚಿಸಲಾಗಿದೆ.

ಉಡುಪಿ, ಮಾರ್ಚ್ 16: ಪಡುಬಿದ್ರಿಯ ಕಟಪಾಡಿ ಬಳಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದುಸ್ತಾನ್ ಪೆಟ್ರೋಲಿಯಂ ಕಂಪೆನಿಗೆ ಸೇರಿದ ಗ್ಯಾಸ್ ಟ್ಯಾಂಕ‌ರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದು ಟ್ರಾಫಿಕ್ ಜಾಮ್ ಆಗಿದೆ. ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುರಕ್ಷತೆಗಾಗಿ ಸಂಚಾರಕ್ಕೆ ಪರ್ಯಾಯ ರಸ್ತೆ ಸೂಚಿಸಲಾಗಿದೆ. 

ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ- ಮೂಡಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗುವುದು ಅಥವಾ ಪಡುಬಿದ್ರೆ ಬೆಳ್ಳಣ್- ಶಿರ್ವ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತೆರಳುವಂತೆ ಸೂಚಿಸಲಾಗಿದೆ. 

ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ- ಮೂಡಬೆಳ್ಳೆ ಮಾರ್ಗವಾಗಿ ಶಿರ್ವ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳುವುದು ಅಥವಾ ಮಣಿಪಾಲದಿಂದ ಶಿರ್ವ-ಬೆಳ್ಮಣ್ ಮಾರ್ಗವಾಗಿ ಪಡುಬಿದ್ರೆ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸುವುದಕ್ಕೆ ಉಡುಪಿ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‌