ಬ್ರೇಕಿಂಗ್ ನ್ಯೂಸ್
17-03-26 01:40 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರಿದ್ ಮತ್ತು ಶೇಹರಾಜ್ ಅಲಿಯಾಸ್ ಶಾರೂಕ್ ಎಂಬವರು ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ.
ಮಾರ್ಚ್ 13ರ ರಾತ್ರಿ ಸುಮಾರು 8 ಗಂಟೆಗೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಕರ್ತವ್ಯದಲ್ಲಿದ್ದಾಗ, ವಿಚಾರಣಾಧೀನ ಕೈದಿ ಮೊಹಮ್ಮದ್ ಇಕ್ಬಾಲ್ ಅಧೀಕ್ಷಕರ ಕಚೇರಿಗೆ ನುಗ್ಗಿ ರಂಪಾಟ ಮಾಡಿದ್ದಾನೆ. ಹೊಸದಾಗಿ ಬರುವ ಕೈದಿಗಳನ್ನು ತನ್ನ ಸೂಚನೆಯಂತೆ ತನ್ನ ಕೊಠಡಿಗೇ ಸೇರಿಸಬೇಕು ಎಂದು ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಜೈಲು ಅಧೀಕ್ಷಕರಿಗೆ “ನೀನೇ ನನ್ನ ಟಾರ್ಗೆಟ್” ಎಂದು ಕೊಲೆ ಬೆದರಿಕೆ ಹಾಕಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಇದೇ ವೇಳೆ, ಈತನಿಗೆ ಸಾಥ್ ನೀಡಿದ ಮತ್ತೊಬ್ಬ ಕೈದಿ ಮೊಹಮ್ಮದ್ ಆಫ್ರೀದ್ ಪ್ಲಾಸ್ಟಿಕ್ ಕುರ್ಚಿಯಿಂದ ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಇಬ್ಬರು ಕೈದಿಗಳು ಸೇರಿ ಜೈಲಿನಲ್ಲಿದ್ದ R.O. ವಾಟರ್ ಫಿಲ್ಟರ್ ಮೆಷಿನ್ ಮತ್ತು ಪೈಪ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದರ ಅಂದಾಜು ಮೌಲ್ಯ ₹12,000 ಎಂದು ಹೇಳಲಾಗಿದೆ.
ಇದೇ ಸಮಯದಲ್ಲಿ ಶೇಹರಾಜ್ ಅಲಿಯಾಸ್ ಶಾರೂಕ್ ಎಂಬ ಕೈದಿ ಕೊಠಡಿಯ ಒಳಗಿನಿಂದಲೇ ಹಾಸಿಗೆ-ಹೊದಿಕೆಗಳಿಗೆ ಬೆಂಕಿ ಹಚ್ಚಿ, ಕ್ಯಾರಂ ಬೋರ್ಡ್ಗಳನ್ನು ಮುರಿದು ಹಲ್ಲೆ ಮಾಡಲು ಪ್ರಚೋದಿಸಿದ್ದಾನೆ. ಅಧೀಕ್ಷಕ ಶರಣಬಸಪ್ಪ ಅವರು ನೀಡಿದ ದೂರಿನ ಮೇರೆಗೆ ಮೂವರು ಕೈದಿಗಳ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಮತ್ತು ಸರ್ಕಾರಿ ಸ್ವತ್ತು ನಾಶಪಡಿಸಿದ ಆರೋಪದಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm