ಬ್ರೇಕಿಂಗ್ ನ್ಯೂಸ್
17-03-26 01:40 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರಿದ್ ಮತ್ತು ಶೇಹರಾಜ್ ಅಲಿಯಾಸ್ ಶಾರೂಕ್ ಎಂಬವರು ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ.
ಮಾರ್ಚ್ 13ರ ರಾತ್ರಿ ಸುಮಾರು 8 ಗಂಟೆಗೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಕರ್ತವ್ಯದಲ್ಲಿದ್ದಾಗ, ವಿಚಾರಣಾಧೀನ ಕೈದಿ ಮೊಹಮ್ಮದ್ ಇಕ್ಬಾಲ್ ಅಧೀಕ್ಷಕರ ಕಚೇರಿಗೆ ನುಗ್ಗಿ ರಂಪಾಟ ಮಾಡಿದ್ದಾನೆ. ಹೊಸದಾಗಿ ಬರುವ ಕೈದಿಗಳನ್ನು ತನ್ನ ಸೂಚನೆಯಂತೆ ತನ್ನ ಕೊಠಡಿಗೇ ಸೇರಿಸಬೇಕು ಎಂದು ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಜೈಲು ಅಧೀಕ್ಷಕರಿಗೆ “ನೀನೇ ನನ್ನ ಟಾರ್ಗೆಟ್” ಎಂದು ಕೊಲೆ ಬೆದರಿಕೆ ಹಾಕಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಇದೇ ವೇಳೆ, ಈತನಿಗೆ ಸಾಥ್ ನೀಡಿದ ಮತ್ತೊಬ್ಬ ಕೈದಿ ಮೊಹಮ್ಮದ್ ಆಫ್ರೀದ್ ಪ್ಲಾಸ್ಟಿಕ್ ಕುರ್ಚಿಯಿಂದ ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಇಬ್ಬರು ಕೈದಿಗಳು ಸೇರಿ ಜೈಲಿನಲ್ಲಿದ್ದ R.O. ವಾಟರ್ ಫಿಲ್ಟರ್ ಮೆಷಿನ್ ಮತ್ತು ಪೈಪ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದರ ಅಂದಾಜು ಮೌಲ್ಯ ₹12,000 ಎಂದು ಹೇಳಲಾಗಿದೆ.
ಇದೇ ಸಮಯದಲ್ಲಿ ಶೇಹರಾಜ್ ಅಲಿಯಾಸ್ ಶಾರೂಕ್ ಎಂಬ ಕೈದಿ ಕೊಠಡಿಯ ಒಳಗಿನಿಂದಲೇ ಹಾಸಿಗೆ-ಹೊದಿಕೆಗಳಿಗೆ ಬೆಂಕಿ ಹಚ್ಚಿ, ಕ್ಯಾರಂ ಬೋರ್ಡ್ಗಳನ್ನು ಮುರಿದು ಹಲ್ಲೆ ಮಾಡಲು ಪ್ರಚೋದಿಸಿದ್ದಾನೆ. ಅಧೀಕ್ಷಕ ಶರಣಬಸಪ್ಪ ಅವರು ನೀಡಿದ ದೂರಿನ ಮೇರೆಗೆ ಮೂವರು ಕೈದಿಗಳ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಮತ್ತು ಸರ್ಕಾರಿ ಸ್ವತ್ತು ನಾಶಪಡಿಸಿದ ಆರೋಪದಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am