ಬ್ರೇಕಿಂಗ್ ನ್ಯೂಸ್
17-03-26 01:40 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರಿದ್ ಮತ್ತು ಶೇಹರಾಜ್ ಅಲಿಯಾಸ್ ಶಾರೂಕ್ ಎಂಬವರು ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ.
ಮಾರ್ಚ್ 13ರ ರಾತ್ರಿ ಸುಮಾರು 8 ಗಂಟೆಗೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಕರ್ತವ್ಯದಲ್ಲಿದ್ದಾಗ, ವಿಚಾರಣಾಧೀನ ಕೈದಿ ಮೊಹಮ್ಮದ್ ಇಕ್ಬಾಲ್ ಅಧೀಕ್ಷಕರ ಕಚೇರಿಗೆ ನುಗ್ಗಿ ರಂಪಾಟ ಮಾಡಿದ್ದಾನೆ. ಹೊಸದಾಗಿ ಬರುವ ಕೈದಿಗಳನ್ನು ತನ್ನ ಸೂಚನೆಯಂತೆ ತನ್ನ ಕೊಠಡಿಗೇ ಸೇರಿಸಬೇಕು ಎಂದು ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಜೈಲು ಅಧೀಕ್ಷಕರಿಗೆ “ನೀನೇ ನನ್ನ ಟಾರ್ಗೆಟ್” ಎಂದು ಕೊಲೆ ಬೆದರಿಕೆ ಹಾಕಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಇದೇ ವೇಳೆ, ಈತನಿಗೆ ಸಾಥ್ ನೀಡಿದ ಮತ್ತೊಬ್ಬ ಕೈದಿ ಮೊಹಮ್ಮದ್ ಆಫ್ರೀದ್ ಪ್ಲಾಸ್ಟಿಕ್ ಕುರ್ಚಿಯಿಂದ ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಇಬ್ಬರು ಕೈದಿಗಳು ಸೇರಿ ಜೈಲಿನಲ್ಲಿದ್ದ R.O. ವಾಟರ್ ಫಿಲ್ಟರ್ ಮೆಷಿನ್ ಮತ್ತು ಪೈಪ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದರ ಅಂದಾಜು ಮೌಲ್ಯ ₹12,000 ಎಂದು ಹೇಳಲಾಗಿದೆ.
ಇದೇ ಸಮಯದಲ್ಲಿ ಶೇಹರಾಜ್ ಅಲಿಯಾಸ್ ಶಾರೂಕ್ ಎಂಬ ಕೈದಿ ಕೊಠಡಿಯ ಒಳಗಿನಿಂದಲೇ ಹಾಸಿಗೆ-ಹೊದಿಕೆಗಳಿಗೆ ಬೆಂಕಿ ಹಚ್ಚಿ, ಕ್ಯಾರಂ ಬೋರ್ಡ್ಗಳನ್ನು ಮುರಿದು ಹಲ್ಲೆ ಮಾಡಲು ಪ್ರಚೋದಿಸಿದ್ದಾನೆ. ಅಧೀಕ್ಷಕ ಶರಣಬಸಪ್ಪ ಅವರು ನೀಡಿದ ದೂರಿನ ಮೇರೆಗೆ ಮೂವರು ಕೈದಿಗಳ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಮತ್ತು ಸರ್ಕಾರಿ ಸ್ವತ್ತು ನಾಶಪಡಿಸಿದ ಆರೋಪದಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am