ಬ್ರೇಕಿಂಗ್ ನ್ಯೂಸ್
17-03-26 05:46 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯಂ: ರುಪಾಂ ಆನಿ ರೂಪಕಾಂ (2021)ಗೆ ನೀಡಲಾಗಿದೆ.
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಭಾರತ ಸರ್ಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಸೇರಿ ಒಟ್ಟು 24 ಭಾಷೆಗಳ ಉತ್ಕೃಷ್ಟ ಕೃತಿಗಳನ್ನು ಆಯ್ದು ಈ ಪುರಸ್ಕಾರ ನೀಡಲಾಗುತ್ತದೆ.
ಕೊಂಕಣಿ ಭಾಷೆಗೆ 1975ರಲ್ಲಿ ಸಾಹಿತ್ಯ ಅಕಾಡೆಮಿಯಿಂದ ಮಾನ್ಯತೆ ದೊರಕಿತ್ತು. 1977ರಿಂದ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷೆಯ ಕೃತಿಗಳಿಗೂ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ಹಿಂದೆ ಮಂಗಳೂರಿನ ಚಾ. ಫ್ರಾ. ದೆಕೊಸ್ತಾ (1992) ಮತ್ತು ಮೆಲ್ವಿನ್ ರೊಡ್ರಿಗಸ್ (2011) ಕವನ ಸಂಕಲನಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದರು. 2016ರಲ್ಲಿ ಎಡ್ರಿನ್ ಜೆ.ಎಫ್.ಡಿ. ಸೊಜಾ ಅವರು ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು. ಎಚ್.ಎಂ. ಪೆರ್ನಾಲ್ ಅವರು ಈ ಪರಂಪರೆಯನ್ನು ಮುಂದುವರೆಸುತ್ತಿರುವ ಕರ್ನಾಟಕದ ನಾಲ್ಕನೇ ಕೊಂಕಣಿ ಸಾಹಿತಿಯಾಗಿದ್ದಾರೆ.
ಪೆರ್ನಾಲ್ ಅವರ ಕೊಂಕಣಿ ಕಾವ್ಯಂ: ರುಪಾಂ ಆನಿ ರೂಪಕಾಂ ಕೃತಿಯು ಸಾಹಿತ್ಯ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ಪಡೆದ ಮೊದಲ ಕೊಂಕಣಿ ಕೃತಿ ಎಂಬ ಐತಿಹಾಸಿಕ ಮೈಲುಗಲ್ಲನ್ನು ಸ್ಥಾಪಿಸಿದೆ. ಈ ಕೃತಿಗೆ ಮೊದಲು 2021ರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಹಾಗೂ 2023ರಲ್ಲಿ ಗೋವಾ ಕೊಂಕಣಿ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಲಭಿಸಿತ್ತು. ಈ ಪುಸ್ತಕಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ್ ಮೌಜೋ ಅವರು ವಿಸ್ತ್ರತ ಮುನ್ನುಡಿ ಬರೆದಿದ್ದು, ಮಂಗಳೂರಿನ ಕವಿತಾ ಪಬ್ಲಿಕೇಷನ್ಸ್ ಪುಸ್ತಕವನ್ನು ಪ್ರಕಟಿಸಿದೆ.
ಉಡುಪಿ ಜಿಲ್ಲೆಯ ಪೆರ್ನಾಲ್ನಲ್ಲಿ ಹುಟ್ಟಿ, ಶಿರ್ವದ ಹಿಂದೂ ಜೂನಿಯರ್ ಕಾಲೇಜು ಹಾಗೂ ಎಂ.ಎಸ್.ಆರ್.ಎಸ್. ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದು, ಮುಂಬೈಯಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಹೆನ್ರಿ ಮೆಂಡೋನ್ಸಾ ವೃತ್ತಿಯಲ್ಲಿ ಕಮರ್ಷಿಯಲ್ ಅಕೌಂಟೆಂಟ್ ಆಗಿದ್ದಾರೆ. ಕನ್ನಡದಲ್ಲಿ ತರಂಗ, ಸಂಕ್ರಮಣ, ಶೂದ್ರ ಮುಂತಾದ ಪತ್ರಿಕೆಗಳ ಮೂಲಕ ಬರವಣಿಗೆ ಆರಂಭಿಸಿದ ಅವರು 1980ರ ದಶಕದ ಆರಂಭದಲ್ಲಿ ಯುವಕ್ ಮಾಸಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಕೊಂಕಣಿ ಸಾಹಿತ್ಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ಪ್ರಸ್ತುತ ಕಥೆಗಾರ, ಕವಿ, ವಿಮರ್ಶಕ, ಸಂಪಾದಕ ಹಾಗೂ ಪ್ರಕಾಶಕರಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ.
ಈವರೆಗೆ ಪೆರ್ನಾಲ್ ಅವರ ನಾಲ್ಕು ಕವನ ಸಂಕಲನಗಳು ಚಲ್ಯಾಂಕ್ ಚತ್ರಾಯ್ (1999), ಕಯ್ದಾಚೊ ಕವಿತಾ (2004), ಭಾಮುಣಾಂಚೆಂ ಚೆಡುಂ (2006) ಮತ್ತು ಜನೆಲ್ (2025), ಎರಡು ಕಥಾ ಸಂಕಲನಗಳು – ದೆವಾಕ್ ಸೊಡುಲ್ಲೊ ಪಾಡೊ (2002) ಮತ್ತು ಬೀಗ್ ಆನಿ ಬಿಗಾತ್ (2016), ಹಾಗೂ ಪ್ರಶಸ್ತಿ ವಿಜೇತ ಸಾಹಿತ್ಯ ವಿಮರ್ಶೆಯ ಕೃತಿ ಕೊಂಕಣಿ ಕಾವ್ಯಂ: ರುಪಾಂ ಆನಿ ರೂಪಕಾಂ (2021) ಪ್ರಕಟವಾಗಿವೆ.
850ಕ್ಕೂ ಹೆಚ್ಚು ಕವಿತೆಗಳು, 100ಕ್ಕೂ ಹೆಚ್ಚು ಕಥೆಗಳು ಹಾಗೂ 2,000ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಪೆರ್ನಾಲ್ ಅವರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕೊಂಕಣಿ ಸಾಹಿತ್ಯವನ್ನು ಪೋಷಿಸುತ್ತಾ ಬಂದಿದ್ದಾರೆ. 2012ರಿಂದ ಉದಯೋನ್ಮುಖ ಬರಹಗಾರರನ್ನು ಗುರುತಿಸಿ ಪ್ರತೀ ವರ್ಷ ಅಬುಧಾಬಿಯ ಉದ್ಯಮಿ ಹಾಗೂ ದಾನಿ ಲಿಯೋ ರೊಡ್ರಿಗಸ್ ಕುಟುಂಬದ ದತ್ತಿಯಾಗಿ ಕಿಟಾಳ್ ಯುವ ಪುರಸ್ಕಾರವನ್ನು ನೀಡುತ್ತಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am