ಬ್ರೇಕಿಂಗ್ ನ್ಯೂಸ್
17-03-26 07:16 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಆರೋಪ ಪ್ರಕರಣದ ಬಗ್ಗೆ ಪ್ರಾಥಮಿಕ ವರದಿ ಪಡೆದ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಇಲಾಖಾ ತನಿಖೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಇನ್ಸ್ ಪೆಕ್ಟರ್ ಬಗ್ಗೆ ಆರೋಪ ಮಾಡಿರುವ ಸುಮತಿ ನಾಯ್ಕ್ ಮತ್ತು ಅವರ ಅಕ್ಕನ ವಿಚಾರದಲ್ಲಿ ಕೌಟುಂಬಿಕ ಕಲಹದ ಬಗ್ಗೆ ಪ್ರತ್ಯೇಕ ನಾಲ್ಕು ಕೇಸು ದಾಖಲಾಗಿದೆ. ಈ ಪೈಕಿ ಒಂದು ಕೇಸು ತನಿಖಾ ಹಂತದಲ್ಲಿದ್ದು ಇತರ ಮೂರು ಕೇಸುಗಳು ಹೈಕೋರ್ಟ್ ನಲ್ಲಿ ಸ್ಟೇಯಾಗಿದೆ. ಅವಿತಾ ಮಿನೇಜಸ್ ಎಂಬ ಮತ್ತೊಬ್ಬ ಮಹಿಳೆ ಮಾಧ್ಯಮಕ್ಕೆ ಆರೋಪ ಮಾಡಿದ್ದು ಆಕೆಯ ಗಂಡನ ಬಗ್ಗೆ ನಾಲ್ಕು ಕೇಸು ಮೂಡುಬಿದ್ರೆಯಲ್ಲಿ ದಾಖಲಾಗಿದೆ. ಒಂದರಲ್ಲಿ ಬಡ ಕುಟುಂಬದ ಕಿಡ್ನಿ ಚಿಕಿತ್ಸೆಗೆಂದು ಹಣ ಸಂಗ್ರಹಿಸಿದ ವಿಚಾರದಲ್ಲಿ ದಂಪತಿ ವಿರುದ್ಧ ಕೇಸು ದಾಖಲಾಗಿದ್ದು ಇನ್ಸ್ ಪೆಕ್ಟರ್ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವೇಳೆ, ಆಕೆಗೆ ಇನ್ಸ್ ಪೆಕ್ಟರ್ ಕಿರುಕುಳ ನೀಡಿದ್ದಾರೆಂಬ ವಿಚಾರದಲ್ಲಿ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ಜೊತೆಗಿದ್ದ ಇಬ್ಬರು ಮೀಡಿಯಾದವರು ಮತ್ತು ಒಬ್ಬರು ವಕೀಲರನ್ನು ಪ್ರಶ್ನಿಸಿದ್ದು ಹಣ ಕೇಳಿರುವುದು ಮತ್ತು ಲೈಂಗಿಕ ಕಿರುಕುಳದ ಆರೋಪವನ್ನು ನಿರಾಕರಿಸಿದ್ದಾರೆ.
ಇವರಿಬ್ಬರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರೆ, ಆಡಿಯೋದಲ್ಲಿ ಮಾತನಾಡಿದ್ದು ಮತ್ತು ವಿಡಿಯೋದಲ್ಲಿ ಕಾಣಿಸಿಕೊಂಡವರು ಬೇರೆಯೇ ಆಗಿದ್ದಾರೆ. ಆದರೆ ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ಮಾತು, ವರ್ತನೆ ಪ್ರಶ್ನಾರ್ಹವಾಗಿದ್ದು ಬೇಜವಾಬ್ದಾರಿಯಿಂದ ಮಾತನಾಡಿದ್ದು ಕಂಡುಬಂದಿದೆ. ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಮಹಿಳೆಯರು ಘಟನೆ ಬಗ್ಗೆ ತನಿಖೆಗೆ ಪೊಲೀಸ್ ದೂರು ಕೊಡಲು ನಿರಾಕರಿಸಿದ್ದಾರೆ. ಆದರೆ ಇನ್ಸ್ ಪೆಕ್ಟರ್ ಆಗಿದ್ದುಕೊಂಡು ಮಹಿಳೆಯರ ಜೊತೆಗೆ ದುರ್ನಡತೆ ತೋರಿದ್ದಕ್ಕಾಗಿ ಸಂದೇಶ್ ಅವರನ್ನು ಕರ್ತವ್ಯದಿಂದ ಅಮಾನತು ಪಡಿಸಿದ್ದು ಸಮಗ್ರ ತನಿಖೆ ನಡೆಸಲು ಎಸಿಪಿಗೆ ಹೊಣೆ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Moodbidri Police Inspector Sandesh has been suspended from duty pending a departmental inquiry, following allegations of misconduct involving women. The action was taken by Mangaluru Police Commissioner Sudheer Reddy after reviewing a preliminary report on the matter.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm