ಬ್ರೇಕಿಂಗ್ ನ್ಯೂಸ್
17-03-26 07:16 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಆರೋಪ ಪ್ರಕರಣದ ಬಗ್ಗೆ ಪ್ರಾಥಮಿಕ ವರದಿ ಪಡೆದ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಇಲಾಖಾ ತನಿಖೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಇನ್ಸ್ ಪೆಕ್ಟರ್ ಬಗ್ಗೆ ಆರೋಪ ಮಾಡಿರುವ ಸುಮತಿ ನಾಯ್ಕ್ ಮತ್ತು ಅವರ ಅಕ್ಕನ ವಿಚಾರದಲ್ಲಿ ಕೌಟುಂಬಿಕ ಕಲಹದ ಬಗ್ಗೆ ಪ್ರತ್ಯೇಕ ನಾಲ್ಕು ಕೇಸು ದಾಖಲಾಗಿದೆ. ಈ ಪೈಕಿ ಒಂದು ಕೇಸು ತನಿಖಾ ಹಂತದಲ್ಲಿದ್ದು ಇತರ ಮೂರು ಕೇಸುಗಳು ಹೈಕೋರ್ಟ್ ನಲ್ಲಿ ಸ್ಟೇಯಾಗಿದೆ. ಅವಿತಾ ಮಿನೇಜಸ್ ಎಂಬ ಮತ್ತೊಬ್ಬ ಮಹಿಳೆ ಮಾಧ್ಯಮಕ್ಕೆ ಆರೋಪ ಮಾಡಿದ್ದು ಆಕೆಯ ಗಂಡನ ಬಗ್ಗೆ ನಾಲ್ಕು ಕೇಸು ಮೂಡುಬಿದ್ರೆಯಲ್ಲಿ ದಾಖಲಾಗಿದೆ. ಒಂದರಲ್ಲಿ ಬಡ ಕುಟುಂಬದ ಕಿಡ್ನಿ ಚಿಕಿತ್ಸೆಗೆಂದು ಹಣ ಸಂಗ್ರಹಿಸಿದ ವಿಚಾರದಲ್ಲಿ ದಂಪತಿ ವಿರುದ್ಧ ಕೇಸು ದಾಖಲಾಗಿದ್ದು ಇನ್ಸ್ ಪೆಕ್ಟರ್ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವೇಳೆ, ಆಕೆಗೆ ಇನ್ಸ್ ಪೆಕ್ಟರ್ ಕಿರುಕುಳ ನೀಡಿದ್ದಾರೆಂಬ ವಿಚಾರದಲ್ಲಿ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ಜೊತೆಗಿದ್ದ ಇಬ್ಬರು ಮೀಡಿಯಾದವರು ಮತ್ತು ಒಬ್ಬರು ವಕೀಲರನ್ನು ಪ್ರಶ್ನಿಸಿದ್ದು ಹಣ ಕೇಳಿರುವುದು ಮತ್ತು ಲೈಂಗಿಕ ಕಿರುಕುಳದ ಆರೋಪವನ್ನು ನಿರಾಕರಿಸಿದ್ದಾರೆ.
ಇವರಿಬ್ಬರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರೆ, ಆಡಿಯೋದಲ್ಲಿ ಮಾತನಾಡಿದ್ದು ಮತ್ತು ವಿಡಿಯೋದಲ್ಲಿ ಕಾಣಿಸಿಕೊಂಡವರು ಬೇರೆಯೇ ಆಗಿದ್ದಾರೆ. ಆದರೆ ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ಮಾತು, ವರ್ತನೆ ಪ್ರಶ್ನಾರ್ಹವಾಗಿದ್ದು ಬೇಜವಾಬ್ದಾರಿಯಿಂದ ಮಾತನಾಡಿದ್ದು ಕಂಡುಬಂದಿದೆ. ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಮಹಿಳೆಯರು ಘಟನೆ ಬಗ್ಗೆ ತನಿಖೆಗೆ ಪೊಲೀಸ್ ದೂರು ಕೊಡಲು ನಿರಾಕರಿಸಿದ್ದಾರೆ. ಆದರೆ ಇನ್ಸ್ ಪೆಕ್ಟರ್ ಆಗಿದ್ದುಕೊಂಡು ಮಹಿಳೆಯರ ಜೊತೆಗೆ ದುರ್ನಡತೆ ತೋರಿದ್ದಕ್ಕಾಗಿ ಸಂದೇಶ್ ಅವರನ್ನು ಕರ್ತವ್ಯದಿಂದ ಅಮಾನತು ಪಡಿಸಿದ್ದು ಸಮಗ್ರ ತನಿಖೆ ನಡೆಸಲು ಎಸಿಪಿಗೆ ಹೊಣೆ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Moodbidri Police Inspector Sandesh has been suspended from duty pending a departmental inquiry, following allegations of misconduct involving women. The action was taken by Mangaluru Police Commissioner Sudheer Reddy after reviewing a preliminary report on the matter.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am