ಬ್ರೇಕಿಂಗ್ ನ್ಯೂಸ್
17-03-26 07:16 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಆರೋಪ ಪ್ರಕರಣದ ಬಗ್ಗೆ ಪ್ರಾಥಮಿಕ ವರದಿ ಪಡೆದ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಇಲಾಖಾ ತನಿಖೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಇನ್ಸ್ ಪೆಕ್ಟರ್ ಬಗ್ಗೆ ಆರೋಪ ಮಾಡಿರುವ ಸುಮತಿ ನಾಯ್ಕ್ ಮತ್ತು ಅವರ ಅಕ್ಕನ ವಿಚಾರದಲ್ಲಿ ಕೌಟುಂಬಿಕ ಕಲಹದ ಬಗ್ಗೆ ಪ್ರತ್ಯೇಕ ನಾಲ್ಕು ಕೇಸು ದಾಖಲಾಗಿದೆ. ಈ ಪೈಕಿ ಒಂದು ಕೇಸು ತನಿಖಾ ಹಂತದಲ್ಲಿದ್ದು ಇತರ ಮೂರು ಕೇಸುಗಳು ಹೈಕೋರ್ಟ್ ನಲ್ಲಿ ಸ್ಟೇಯಾಗಿದೆ. ಅವಿತಾ ಮಿನೇಜಸ್ ಎಂಬ ಮತ್ತೊಬ್ಬ ಮಹಿಳೆ ಮಾಧ್ಯಮಕ್ಕೆ ಆರೋಪ ಮಾಡಿದ್ದು ಆಕೆಯ ಗಂಡನ ಬಗ್ಗೆ ನಾಲ್ಕು ಕೇಸು ಮೂಡುಬಿದ್ರೆಯಲ್ಲಿ ದಾಖಲಾಗಿದೆ. ಒಂದರಲ್ಲಿ ಬಡ ಕುಟುಂಬದ ಕಿಡ್ನಿ ಚಿಕಿತ್ಸೆಗೆಂದು ಹಣ ಸಂಗ್ರಹಿಸಿದ ವಿಚಾರದಲ್ಲಿ ದಂಪತಿ ವಿರುದ್ಧ ಕೇಸು ದಾಖಲಾಗಿದ್ದು ಇನ್ಸ್ ಪೆಕ್ಟರ್ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವೇಳೆ, ಆಕೆಗೆ ಇನ್ಸ್ ಪೆಕ್ಟರ್ ಕಿರುಕುಳ ನೀಡಿದ್ದಾರೆಂಬ ವಿಚಾರದಲ್ಲಿ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ಜೊತೆಗಿದ್ದ ಇಬ್ಬರು ಮೀಡಿಯಾದವರು ಮತ್ತು ಒಬ್ಬರು ವಕೀಲರನ್ನು ಪ್ರಶ್ನಿಸಿದ್ದು ಹಣ ಕೇಳಿರುವುದು ಮತ್ತು ಲೈಂಗಿಕ ಕಿರುಕುಳದ ಆರೋಪವನ್ನು ನಿರಾಕರಿಸಿದ್ದಾರೆ.
ಇವರಿಬ್ಬರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರೆ, ಆಡಿಯೋದಲ್ಲಿ ಮಾತನಾಡಿದ್ದು ಮತ್ತು ವಿಡಿಯೋದಲ್ಲಿ ಕಾಣಿಸಿಕೊಂಡವರು ಬೇರೆಯೇ ಆಗಿದ್ದಾರೆ. ಆದರೆ ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ಮಾತು, ವರ್ತನೆ ಪ್ರಶ್ನಾರ್ಹವಾಗಿದ್ದು ಬೇಜವಾಬ್ದಾರಿಯಿಂದ ಮಾತನಾಡಿದ್ದು ಕಂಡುಬಂದಿದೆ. ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಮಹಿಳೆಯರು ಘಟನೆ ಬಗ್ಗೆ ತನಿಖೆಗೆ ಪೊಲೀಸ್ ದೂರು ಕೊಡಲು ನಿರಾಕರಿಸಿದ್ದಾರೆ. ಆದರೆ ಇನ್ಸ್ ಪೆಕ್ಟರ್ ಆಗಿದ್ದುಕೊಂಡು ಮಹಿಳೆಯರ ಜೊತೆಗೆ ದುರ್ನಡತೆ ತೋರಿದ್ದಕ್ಕಾಗಿ ಸಂದೇಶ್ ಅವರನ್ನು ಕರ್ತವ್ಯದಿಂದ ಅಮಾನತು ಪಡಿಸಿದ್ದು ಸಮಗ್ರ ತನಿಖೆ ನಡೆಸಲು ಎಸಿಪಿಗೆ ಹೊಣೆ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Moodbidri Police Inspector Sandesh has been suspended from duty pending a departmental inquiry, following allegations of misconduct involving women. The action was taken by Mangaluru Police Commissioner Sudheer Reddy after reviewing a preliminary report on the matter.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm