ಬ್ರೇಕಿಂಗ್ ನ್ಯೂಸ್
17-03-26 07:35 pm HK News Staffer ಕರಾವಳಿ
ಉಡುಪಿ, ಮಾ.17: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರ ವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ 'ಸಮಾಧಾನ ಮಹೋತ್ಸವ' ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ ಸಮಾಧಾನದ ಹೆಸರಿನಲ್ಲಿ ನಡೆಯುತ್ತಿರುವ ಮತಾಂತರದ ಷಡ್ಯಂತ್ರವಾಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದಕ್ಕೆ ಕೂಡಲೇ ತಡೆ ನೀಡಬೇಕೆಂದು ಜಾಗರಣ ವೇದಿಕೆ ಒತ್ತಾಯಿಸುತ್ತದೆ ಎಂದರು.
ತಮಿಳುನಾಡಿನಲ್ಲಿ ಲಾಝರಸ್ ಅವರ ವಿರುದ್ಧ ಸಾಕಷ್ಟು ಕ್ರಿಮಿನಲ್ ಕೇಸುಗಳಿದ್ದು ಹಲವು ಗಂಭೀರ ಆರೋಪಗಳೂ ಇವೆ ಎಂದ ಶ್ರೀಕಾಂತ್ ಶೆಟ್ಟಿ, ಹಿಂದು ವಿರೋಧಿ ಭಾಷಣ, ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಕುರಿತಂತೆ ತಮಿಳುನಾಡಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿವೆ ಎಂದರು.

ಉಡುಪಿಯಂಥ ಶಾಂತ ನಗರದಲ್ಲಿ ಧಾರ್ಮಿಕ ಅಶಾಂತಿ ಮೂಡಿಸುವ ವಿವಾದಾತ್ಮಕ ವ್ಯಕ್ತಿಗಳ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಮನವಿ ಮಾಡಿದ ಅವರು, ಒಂದು ವೇಳೆ ಅನುಮತಿ ನೀಡಿದಲ್ಲಿ ವೇದಿಕೆಯಿಂದ ಜಿಲ್ಲೆಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಿಂಜಾವೇಯ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ, ಜಿಲ್ಲಾ ಪ್ರಮುಖರಾದ ರತ್ನಾಕರ ಅಮೀನ್, ಗುರುಪ್ರಸಾದ್ ನಾರಾವಿ, ವಿಜಯಕೊಡವೂರು ಉಪಸ್ಥಿತರಿದ್ದರು.
A controversy has erupted in Udupi over the proposed “Samadhana Mahotsava” program scheduled from March 20 to 22 at the Mission Compound, to be led by controversial Tamil Nadu-based missionary Mohan C. Lazarus.Hindu Jagarana Vedike leader Srikanth Shetty has strongly opposed the event, stating that it will not be allowed to take place. Addressing a press conference in Udupi, he alleged that the program is a “conversion conspiracy” being carried out under the guise of promoting peace.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am