ಬ್ರೇಕಿಂಗ್ ನ್ಯೂಸ್
17-03-26 10:54 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಭೂ ವ್ಯವಹಾರದಲ್ಲಿನ ವೈಷಮ್ಯದಿಂದ ವ್ಯಕ್ತಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ತನ್ನ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿ ಕೊಲೆಗೆ ಯತ್ನಿಸಿದ ಘಟನೆ ನಗರದ ಆರ್ಯ ಸಮಾಜ ರಸ್ತೆಯಲ್ಲಿ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ (26) ಎಂಬಾತ ಬಂಧಿತ. ಮಲ್ಲಿಕಟ್ಟೆ ನಿವಾಸಿ ಮೋಹನದಾಸ್ ಶೆಟ್ಟಿ (56) ಅವರಿಗೆ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಮ್ಮದ್ ಶರೀಫ್ ಮತ್ತು ಆತನ ತಂದೆ ಮಹಮ್ಮದ್ ಇಕ್ಬಾಲ್ ಎಂಬವರ ಜೊತೆಗೆ ಮೋಹನದಾಸ್ ಶೆಟ್ಟಿಗೆ ಭೂ ವ್ಯವಹಾರವಿದ್ದು, ಸುರತ್ಕಲ್ ನ ಕಾನ ಮತ್ತು ವಾವಂಜೂರಿನಲ್ಲಿ ಸುಮಾರು ಎರಡು ಕೋಟಿ ಮೌಲ್ಯದ ಜಾಗವನ್ನು ಖರೀದಿಸಲು ಹೂಡಿಕೆ ಮಾಡಿದ್ದರು. ವ್ಯವಹಾರದಲ್ಲಿ ಮೋಹನದಾಸ್ ಶೆಟ್ಟಿ ಮೋಸ ಮಾಡಿದ ಸಿಟ್ಟಿನಿಂದ ಇಂದು ಬೆಳಗ್ಗೆ 11 ಗಂಟೆಗೆ ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ, ಮೋಹನದಾಸ ಶೆಟ್ಟಿಯವರ ಮೊಬೈಲ್ ಕಸಿದಿದ್ದು ನಂತರ ತನ್ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿರುವಾಗ ಆರೋಪಿ ವ್ಯಕ್ತಿ ಸಿಟ್ಟಿನಿಂದ ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿ ವೇಗವಾಗ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಗುದ್ದಿ ಕೊಲೆಗೆ ಪ್ರಯತ್ನಿಸಿದ್ದಾನೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಕೃತ್ಯವೆಸಗಿದ ಆರೋಪಿ ಮಹಮ್ಮದ್ ಶರೀಫ್ ಎಂಬಾತನನ್ನು ಪತ್ತೆಮಾಡಿ ದಸ್ತಗಿರಿ ಮಾಡಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm