ಬ್ರೇಕಿಂಗ್ ನ್ಯೂಸ್
17-03-26 10:54 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಭೂ ವ್ಯವಹಾರದಲ್ಲಿನ ವೈಷಮ್ಯದಿಂದ ವ್ಯಕ್ತಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ತನ್ನ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿ ಕೊಲೆಗೆ ಯತ್ನಿಸಿದ ಘಟನೆ ನಗರದ ಆರ್ಯ ಸಮಾಜ ರಸ್ತೆಯಲ್ಲಿ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ (26) ಎಂಬಾತ ಬಂಧಿತ. ಮಲ್ಲಿಕಟ್ಟೆ ನಿವಾಸಿ ಮೋಹನದಾಸ್ ಶೆಟ್ಟಿ (56) ಅವರಿಗೆ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಮ್ಮದ್ ಶರೀಫ್ ಮತ್ತು ಆತನ ತಂದೆ ಮಹಮ್ಮದ್ ಇಕ್ಬಾಲ್ ಎಂಬವರ ಜೊತೆಗೆ ಮೋಹನದಾಸ್ ಶೆಟ್ಟಿಗೆ ಭೂ ವ್ಯವಹಾರವಿದ್ದು, ಸುರತ್ಕಲ್ ನ ಕಾನ ಮತ್ತು ವಾವಂಜೂರಿನಲ್ಲಿ ಸುಮಾರು ಎರಡು ಕೋಟಿ ಮೌಲ್ಯದ ಜಾಗವನ್ನು ಖರೀದಿಸಲು ಹೂಡಿಕೆ ಮಾಡಿದ್ದರು. ವ್ಯವಹಾರದಲ್ಲಿ ಮೋಹನದಾಸ್ ಶೆಟ್ಟಿ ಮೋಸ ಮಾಡಿದ ಸಿಟ್ಟಿನಿಂದ ಇಂದು ಬೆಳಗ್ಗೆ 11 ಗಂಟೆಗೆ ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ, ಮೋಹನದಾಸ ಶೆಟ್ಟಿಯವರ ಮೊಬೈಲ್ ಕಸಿದಿದ್ದು ನಂತರ ತನ್ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿರುವಾಗ ಆರೋಪಿ ವ್ಯಕ್ತಿ ಸಿಟ್ಟಿನಿಂದ ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿ ವೇಗವಾಗ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಗುದ್ದಿ ಕೊಲೆಗೆ ಪ್ರಯತ್ನಿಸಿದ್ದಾನೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಕೃತ್ಯವೆಸಗಿದ ಆರೋಪಿ ಮಹಮ್ಮದ್ ಶರೀಫ್ ಎಂಬಾತನನ್ನು ಪತ್ತೆಮಾಡಿ ದಸ್ತಗಿರಿ ಮಾಡಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am