ಬ್ರೇಕಿಂಗ್ ನ್ಯೂಸ್
02-01-21 07:37 pm Udupi Correspondent ಕರಾವಳಿ
ಉಡುಪಿ, ಜ.2: ತಾಯಿ ಬೈದ ಕಾರಣಕ್ಕೆ ಸಿಟ್ಟಿಗೆದ್ದ ಬಾಲಕ ಫ್ಲ್ಯಾಟ್ನ ಬಾತ್ ರೂಮ್ನಲ್ಲಿ ಚಿಲಕ ಹಾಕಿ ಒಳಗೆ ಅವಿತುಕೊಂಡು ಮನೆಯವರು, ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಯನ್ನೇ ಬೇಸ್ತು ಬೀಳಿಸಿದ್ದಾನೆ.
ಮಣಿಪಾಲ ಪ್ರೆಸ್ ಸಮೀಪ ಇರುವ ಏಳು ಮಹಡಿಯ ವಸತಿ ಸಮುಚ್ಛಯದ ನಾಲ್ಕನೇ ಮಹಡಿಯಲ್ಲಿ ಘಟನೆ ನಡೆದಿದೆ. ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ ಕುಮಾರ್ ನೇತೃತ್ವದಲ್ಲಿ ಒಟ್ಟು ಆರು ಮಂದಿ ಸಿಬ್ಬಂದಿ ಒಂದು ಗಂಟೆ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ಮೊಬೈಲ್ ನೋಡುವ ವಿಚಾರದಲ್ಲಿ ತನ್ನ ಮಗನಿಗೆ ತಾಯಿ ಜ.1ರಂದು ರಾತ್ರಿ ಬೈದಿದ್ದರೆನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ 17ರ ಹರೆಯದ ಬಾಲಕ ಫ್ಲಾಟ್ನ ಬಾತ್ ರೂಮ್ಗೆ ಹೋಗಿ ಚಿಲಕ ಹಾಕಿಕೊಂಡಿದ್ದಾನೆ. ಎಷ್ಟು ಬಾಗಿಲು ಬಡಿದರೂ ತೆಗೆಯದ ಬಾಲಕ ಗಂಟೆಗಳ ಕಾಲ ಯಾವುದೇ ಮಾತಿಲ್ಲದೆ ಕುಳಿತುಕೊಂಡಿದ್ದ ಎನ್ನಲಾಗಿದೆ.
ಇದರಿಂದ ಭಯಭೀತರಾದ ಮನೆಯವರು ಕೂಡಲೇ ಉಡುಪಿ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಸಿಬ್ಬಂದಿಗಳು, ಬಾಲಕನ ರಕ್ಷಣೆಗೆ ಕಾರ್ಯತಂತ್ರ ರೂಪಿಸಿದರು. ಬಾತ್ರೂಮ್ ಬಾಗಿಲು ಮುರಿದರೆ, ಬಾಲಕ ಬಾತ್ರೂಮ್ ಕಿಟಕಿಯಿಂದ ಹೊರಹಾರಬಹುದೆಂಬ ಅಪಾಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಿದ್ದರು.
ಅದಕ್ಕಾಗಿ ಕಟ್ಟಡದ ಏಳನೇ ಮಹಡಿಯಿಂದ ಹಗ್ಗದ ಮೂಲಕ ಓರ್ವ ಸಿಬ್ಬಂದಿ ನಾಲ್ಕನೇ ಮಹಡಿಯ ಬಾತ್ರೂಮ್ನ ಕಿಟಕಿ ಬಳಿಗೆ ಇಳಿದು ಬಾಲಕ ಹೊರ ಹಾರದಂತೆ ತಡೆಯೊಡ್ಡಿದ್ದರು. ಅದೇ ವೇಳೆ ಒಳಗಿನಿಂದ ಬಾತ್ರೂಮ್ ಬಾಗಿಲನ್ನು ಮುರಿದ ಸಿಬ್ಬಂದಿ, ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
A 12-year-old teen in udupi, who locked himself inside the bathroom for hours together as he was disturbed with the fact that his mother took away his mobile phone on which he was playing games, was rescued from the fourth floor of the apartment building.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm