ಬ್ರೇಕಿಂಗ್ ನ್ಯೂಸ್
02-01-21 08:11 pm Mangaluru Correspondent ಕರಾವಳಿ
ಮಂಗಳೂರು, ಜ.2: ಬಿಜೆಪಿ ಪಕ್ಷದ ಬಗ್ಗೆ ಟೀಕಿಸಿ ಬರೆದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಗ್ಯಾಂಗ್ ರೇಪ್ ಮಾಡಬೇಕು ಎಂದು ಫೇಸ್ಬುಕ್ ನಲ್ಲಿ ಕರೆ ಕೊಟ್ಟ ವಿಚಾರದ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿರುವ ಮಂಗಳೂರಿನ ಮಹಿಳೆಯೊಬ್ಬರು, ಫೇಸ್ಬುಕ್ ನಲ್ಲಿ ಬಿಜೆಪಿ ಪಕ್ಷದ ಕುರಿತ ಪರ- ವಿರೋಧ ಚರ್ಚೆಯಲ್ಲಿ ತನ್ನ ಅಭಿಪ್ರಾಯ ಹಾಕಿದ್ದರು. ಎಸ್ ಡಿಪಿಐ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದಿದ್ದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗ ಎಸ್ ಡಿಪಿಐಯನ್ನು ನಿಷೇಧ ಯಾಕೆ ಮಾಡಿಲ್ಲ. ಬಿಜೆಪಿಯವರ ಕುತಂತ್ರಕ್ಕೆ ಎಸ್ ಡಿಪಿಐ ಬೇಕು, ಇದರಿಂದ ಅವರಿಗೆ ಲಾಭ ಇದೆ ಎಂದು ಟೀಕಿಸಿದ್ದರು.


ಚರ್ಚೆಯಲ್ಲಿ ಮಹಿಳೆ ತನ್ನ ಅಭಿಪ್ರಾಯ ಹೇಳಿಕೊಂಡಿದ್ದರು ಅಷ್ಟೇ. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಬಾಬುರಾವ್ ಸರ್ದೇಸಾಯಿ ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ವ್ಯಕ್ತಿ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ಅಲ್ಲದೆ, ಇನ್ನಿತರ ತನ್ನ ಸ್ನೇಹಿತರಿಗೆ ಈಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಬೇಕೆಂದು ಹೇಳಿದ್ದಾನೆ. ಈ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆತನಿಗೆ ಟ್ಯಾಗ್ ಮಾಡಿ ಬರೆದಿದ್ದು ಪ್ರಧಾನಿ ಮೋದಿಯನ್ನು ಅನುಸರಿಸುವ ಮಂದಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದಿದ್ದಾರೆ.
ಬಾಬುರಾವ್ ಸರ್ದೇಸಾಯಿ ಬಿಜೆಪಿ ಕಾರ್ಯಕರ್ತನೇ, ಮೋದಿ ಅಭಿಮಾನಿಯೇ, ತಾನು ಎಲ್ಲಿಯವನು ಎಂಬ ಬಗ್ಗೆ ಪ್ರೊಫೈಲ್ ನಲ್ಲಿ ಹಾಕಿಕೊಂಡಿಲ್ಲ. ಈ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮತ್ತು ಸ್ನೇಹಿತರು ಮಹಿಳೆಯ ಜೊತೆ ಸೇರಿ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Social Activist of Mangalore Threatened of Gang Rape on social media for sharing her political view on BJP party. A case has been filed at the Cybercrime police station.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm